ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Published 26 ಮೇ 2023, 4:36 IST
Last Updated 26 ಮೇ 2023, 4:36 IST
ಅಕ್ಷರ ಗಾತ್ರ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಮಲಾಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮಹ್ಮದ್ ಕುಡಚಿ ಎಂಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡದ ಕಮಲಾಪುರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಹ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ.

ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿರುವ ಸಾಧ್ಯತೆ ಇದೆ. ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿರಬಹುದು. ಆತನ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಹಾಗೂ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT