ಗೋಷ್ಠಿಯ ನಿರ್ದೇಶಕ ಸರಜೂ ಕಾಟ್ಕರ್, ‘ಉಚಲ್ಯಾ ಕಾದಂಬರಿಗಾಗಿ ಗಾಯಕವಾಡರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯು ₹ 1 ಲಕ್ಷ ಬಹುಮಾನ ನೀಡಿ ಗೌರವಿಸಿತು. ಆ ಕಾದಂಬರಿಯಲ್ಲಿ ಹೆಸರಿಸಲಾದ ಕೆಲವರು ಆ ಹಣದಲ್ಲಿ ತಮಗೂ ಪಾಲು ಬೇಕು ಎಂದು ಕೇಳಲು ಶುರು ಮಾಡಿದರು. ಕಾದಂಬರಿಯಲ್ಲಿ ತಮ್ಮ ಬಗ್ಗೆ ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಸಿಟ್ಟಿಗೆದ್ದ ಕೆಲವರು ಗಾಯಕವಾಡರ ಮನೆ ಮೇಲೆ ಕಲ್ಲು ಒಗೆದರು’ ಎಂದು ಅಂದಿನ ಘಟನೆಗಳನ್ನು ನೆನಪಿಸಿಕೊಂಡರು.