<p><strong>ಧಾರವಾಡ</strong>: ಗರಗ ಠಾಣೆ ವ್ಯಾಪ್ತಿಯ ತೇಗೂರು ಚೆಕ್ಪೋಸ್ಟ್ ಬಳಿ ಗುರುವಾರ ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹53ಲಕ್ಷವನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಾವಿಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಾರನ್ನು ತೇಗೂರು ಚೆಕ್ಪೋಸ್ಟ್ ಬಳಿ ತಪಾಸಣೆಗೆ ಒಳಪಡಿಸಿದ ಪೊಲೀಸರಿಗೆ, ಕಾರಿನ ಡಿಕ್ಕಿಯಲ್ಲಿ ನಗದು ಪತ್ತೆಯಾಗಿದೆ. ಕಾರಿನಲ್ಲಿ ಸಂಜೀವ ಹಿರೇಮಠ ಅವರೊಬ್ಬರೇ ಪ್ರಯಾಣಿಸುತ್ತಿದ್ದರು. ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಇದೇ ಠಾಣಾ ವ್ಯಾಪ್ತಿಯಲ್ಲಿ ₹3ಲಕ್ಷ, ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ₹1.99ಲಕ್ಷ, ಕುಂದಗೋಳ ಠಾಣೆ ವ್ಯಾಪ್ತಿಯಲ್ಲಿ ₹1.1ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಅಕ್ರಮ ಚಟುವಟಿಕೆ: ಮೂವರು ಗಡಿಪಾರು</p>.<p>ಧಾರವಾಡ: ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿಯಾದ ಮೂವರನ್ನು ಜಿಲ್ಲಾ ಪೊಲೀಸರು ಗಡಿಪಾರು ಮಾಡಿದ್ದಾರೆ.</p>.<p>ಪಡಿತರ ಅಕ್ಕಿ ಅಕ್ರಮ ದಾಸ್ತಾನು ಸೇರಿದಂತೆ ವಿವಿಧ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಮಂಜುನಾಥ ಹರ್ಲಾಪುರ ಎಂಬಾತನನ್ನು ಬೀದರ್ಗೆ ಗಡಿಪಾರು ಮಾಡಲಾಗಿದೆ.</p>.<p>ಪರಿಶಿಷ್ಟ ಜಾತಿ ದೌರ್ಜನ್ಯ ಪ್ರಕರಣದಲ್ಲಿ ವ್ಯಕ್ತಿಯ ಕೊಲೆ ಹಾಗೂ ಕೊಲೆ ಯತ್ನ ಮತ್ತು ಅಕ್ರಮವಾಗಿ ಮದ್ಯ ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿದಂತೆ ತುಪ್ಪದಕುರುಹಟ್ಟಿಯ ಕುಮಾರ ಗದ್ದಿಗೌಡರ ಎಂಬಾತನನ್ನು ಗದಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.</p>.<p>ಜೂಜು ಅಡ್ಡೆ ನಡೆಸುತ್ತಿದ್ದ ಹಾಗೂ 23 ಜೂಜಾಟ ಪ್ರಕರಣಗಳಲ್ಲಿ ಬಂಧಿತನಾಗಿದ್ದ ಪರಶುರಾಮ ಹಣಬೆ ಎಂಬುವವನನ್ನು ಬಾಗಲಕೋಟೆಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಗರಗ ಠಾಣೆ ವ್ಯಾಪ್ತಿಯ ತೇಗೂರು ಚೆಕ್ಪೋಸ್ಟ್ ಬಳಿ ಗುರುವಾರ ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹53ಲಕ್ಷವನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಾವಿಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಾರನ್ನು ತೇಗೂರು ಚೆಕ್ಪೋಸ್ಟ್ ಬಳಿ ತಪಾಸಣೆಗೆ ಒಳಪಡಿಸಿದ ಪೊಲೀಸರಿಗೆ, ಕಾರಿನ ಡಿಕ್ಕಿಯಲ್ಲಿ ನಗದು ಪತ್ತೆಯಾಗಿದೆ. ಕಾರಿನಲ್ಲಿ ಸಂಜೀವ ಹಿರೇಮಠ ಅವರೊಬ್ಬರೇ ಪ್ರಯಾಣಿಸುತ್ತಿದ್ದರು. ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಇದೇ ಠಾಣಾ ವ್ಯಾಪ್ತಿಯಲ್ಲಿ ₹3ಲಕ್ಷ, ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ₹1.99ಲಕ್ಷ, ಕುಂದಗೋಳ ಠಾಣೆ ವ್ಯಾಪ್ತಿಯಲ್ಲಿ ₹1.1ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಅಕ್ರಮ ಚಟುವಟಿಕೆ: ಮೂವರು ಗಡಿಪಾರು</p>.<p>ಧಾರವಾಡ: ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿಯಾದ ಮೂವರನ್ನು ಜಿಲ್ಲಾ ಪೊಲೀಸರು ಗಡಿಪಾರು ಮಾಡಿದ್ದಾರೆ.</p>.<p>ಪಡಿತರ ಅಕ್ಕಿ ಅಕ್ರಮ ದಾಸ್ತಾನು ಸೇರಿದಂತೆ ವಿವಿಧ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಮಂಜುನಾಥ ಹರ್ಲಾಪುರ ಎಂಬಾತನನ್ನು ಬೀದರ್ಗೆ ಗಡಿಪಾರು ಮಾಡಲಾಗಿದೆ.</p>.<p>ಪರಿಶಿಷ್ಟ ಜಾತಿ ದೌರ್ಜನ್ಯ ಪ್ರಕರಣದಲ್ಲಿ ವ್ಯಕ್ತಿಯ ಕೊಲೆ ಹಾಗೂ ಕೊಲೆ ಯತ್ನ ಮತ್ತು ಅಕ್ರಮವಾಗಿ ಮದ್ಯ ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿದಂತೆ ತುಪ್ಪದಕುರುಹಟ್ಟಿಯ ಕುಮಾರ ಗದ್ದಿಗೌಡರ ಎಂಬಾತನನ್ನು ಗದಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.</p>.<p>ಜೂಜು ಅಡ್ಡೆ ನಡೆಸುತ್ತಿದ್ದ ಹಾಗೂ 23 ಜೂಜಾಟ ಪ್ರಕರಣಗಳಲ್ಲಿ ಬಂಧಿತನಾಗಿದ್ದ ಪರಶುರಾಮ ಹಣಬೆ ಎಂಬುವವನನ್ನು ಬಾಗಲಕೋಟೆಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>