‘ಅರವಿಂದ ಬೆಲ್ಲದ ತಮ್ಮ ಕ್ಷೇತ್ರದ ಜನರಿಗೆ, ಸಮಾಜಕ್ಕೆ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಯಾವ ಕೆಲಸ ಮಾಡಿಕೊಟ್ಟಿದ್ದಾರೆ ಎಂಬುದನ್ನು ಬಹಿರಂಗವಾಗಿ ಹೇಳಲಿ. ಕೋವಿಡ್ ಸಮಯದಲ್ಲಿ ಇನ್ಫೊಸಿಸ್ ಪ್ರತಿಷ್ಠಾನ ನೀಡಿದ ಕಿಟ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಿಎಸ್ಆರ್ ಅನುದಾನದಲ್ಲಿ ಕೊಡಿಸಿದ ಆಹಾರ ಮತ್ತು ಆಮ್ಲಜನಕ ಕಿಟ್ಗಳನ್ನು ವಿತರಿಸಿದ್ದಾರೆಯಷ್ಟೇ. ಪಕ್ಷ ಕಟ್ಟದೆ, ಕ್ಷೇತ್ರದ ಜನರಿಗೆ ದುಡಿಯದ ಬೆಲ್ಲದ ಈಗ ಮುಖ್ಯಮಂತ್ರಿ ಆಗಲು ಹೊರಟಿರುವುದು ಹಾಸ್ಯಾಸ್ಪದ’ ಎಂದರು.