ಭಾರಿ ಬಿಗಿ ಭದ್ರತೆ ಇದ್ದ ಕಾರಣ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ವಿಮಾನ ನಿಲ್ದಾಣ ಪ್ರವೇಶ ನಿಷೇಧಿಸಲಾಗಿತ್ತು. ಶಾ ಜೊತೆ ಒಂದೇ ವಿಮಾನದಲ್ಲಿ ಬಂದ ಕೇಂದ್ರ ಸಚಿವ ಪಿಯೂಷ್ ಗೊಯೆಲ್ ಹುಬ್ಬಳ್ಳಿಯ ಹೋಟೆಲ್ನಲ್ಲಿ ತಂಗಿದ್ದಾರೆ. ಇಂದು ಸಂಜೆ ಅಮಿತ್ ಶಾ ನಗರಕ್ಕೆ ಮರಳಿ ಬರಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.