<p><strong>ಹುಬ್ಬಳ್ಳಿ:</strong> ‘ಬಿಜೆಪಿಯಲ್ಲಿ ಸಮರ್ಥರು ಇದ್ದಾರೋ ಇಲ್ಲವೋ ಎನ್ನುವುದಕ್ಕಿಂತ, ಇದ್ದವರು ಸಮರ್ಥರು ಇದ್ದಾರೋ ಇಲ್ಲವೋ, ಅವರನ್ನೇ ಮುಂದುವರೆಸಬೇಕೋ ಬೇಡವೋ ಎನ್ನುವ ಪ್ರಶ್ನೆಯಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಷಯ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.</p>.<p>‘ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣವೇ ನಮ್ಮ ಮುಂದಿರುವ ಮುಖ್ಯಧ್ಯೇಯ’ ಎಂದರು.</p>.<p>‘ನಾನು ಹುಬ್ಬಳ್ಳಿಯಲ್ಲಿದ್ದಾಗ, ದೆಹಲಿಯಲ್ಲಿದ್ದಾಗ ರಾಜ್ಯದ ಸಚಿವರು ಭೇಟಿ ನೀಡುತ್ತಾ ಇರುತ್ತಾರೆ. ಕೇಂದ್ರ ಸಚಿವನಾಗಿರುವ ಹಿನ್ನೆಲೆಯಲ್ಲಿ, ಕೇಂದ್ರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚಿಸಲು ಬರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಇದನ್ನೂ ಓದಿ... <a href="https://www.prajavani.net/district/belagavi/yediyurappa-bjp-karnataka-belagavi-covid-coronavirus-govind-karjol-abhay-patil-834311.html" target="_blank">ಸಿಎಂ ಸಮ್ಮುಖದಲ್ಲೇ ಕಾರಜೋಳಗೆ ಬಿಸಿ ಮುಟ್ಟಿಸಿದ ಬಿಜೆಪಿ ಶಾಸಕ ಅಭಯ ಪಾಟೀಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಬಿಜೆಪಿಯಲ್ಲಿ ಸಮರ್ಥರು ಇದ್ದಾರೋ ಇಲ್ಲವೋ ಎನ್ನುವುದಕ್ಕಿಂತ, ಇದ್ದವರು ಸಮರ್ಥರು ಇದ್ದಾರೋ ಇಲ್ಲವೋ, ಅವರನ್ನೇ ಮುಂದುವರೆಸಬೇಕೋ ಬೇಡವೋ ಎನ್ನುವ ಪ್ರಶ್ನೆಯಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಷಯ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.</p>.<p>‘ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣವೇ ನಮ್ಮ ಮುಂದಿರುವ ಮುಖ್ಯಧ್ಯೇಯ’ ಎಂದರು.</p>.<p>‘ನಾನು ಹುಬ್ಬಳ್ಳಿಯಲ್ಲಿದ್ದಾಗ, ದೆಹಲಿಯಲ್ಲಿದ್ದಾಗ ರಾಜ್ಯದ ಸಚಿವರು ಭೇಟಿ ನೀಡುತ್ತಾ ಇರುತ್ತಾರೆ. ಕೇಂದ್ರ ಸಚಿವನಾಗಿರುವ ಹಿನ್ನೆಲೆಯಲ್ಲಿ, ಕೇಂದ್ರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚಿಸಲು ಬರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಇದನ್ನೂ ಓದಿ... <a href="https://www.prajavani.net/district/belagavi/yediyurappa-bjp-karnataka-belagavi-covid-coronavirus-govind-karjol-abhay-patil-834311.html" target="_blank">ಸಿಎಂ ಸಮ್ಮುಖದಲ್ಲೇ ಕಾರಜೋಳಗೆ ಬಿಸಿ ಮುಟ್ಟಿಸಿದ ಬಿಜೆಪಿ ಶಾಸಕ ಅಭಯ ಪಾಟೀಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>