<p><strong>ಹುಬ್ಬಳ್ಳಿ: </strong>ಇದೇ ತಿಂಗಳ 29ರಿಂದ ಫೆಬ್ರುವರಿ 15ರ ತನಕ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. 30ರಂದು ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 8ರಿಂದ ಏಪ್ರಿಲ್ 8ರ ತನಕ ಎರಡನೇ ಅವಧಿಯ ಬಜೆಟ್ ಅಧಿವೇಶನ ಜರುಗಲಿದೆ. ಫೆ. 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.</p>.<p>ಕರ್ನಾಟಕಕ್ಕೆ ಅಗತ್ಯವಾಗಿ ಬೇಕಾದ ಸೌಲಭ್ಯಗಳ ಆದ್ಯತೆ ಪಟ್ಟಿಯನ್ನು ಕೇಂದ್ರಕ್ಕೆ ನೀಡಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಯಲಿದೆ. ಕೋವಿಡ್ ಬಳಿಕ ಮೊದಲ ಸಲ ಪೂರ್ಣ ಪ್ರಮಾಣದಲ್ಲಿ ಸರ್ವಪಕ್ಷಗಳ ಸಭೆ ಜರುಗಲಿದೆ. ಪ್ರಶ್ನೋತ್ತರ ಅವಧಿಯೂ ಇರಲಿದೆ ಎಂದರು.</p>.<p>ಕೋವಿಡ್ ಲಸಿಕೆಯನ್ನು ಮೊದಲು ಪ್ರಧಾನಿ ತೆಗೆದುಕೊಳ್ಳಲಿ ಎಂದು ಕಾಂಗ್ರೆಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಮೋದಿ ಅವರನ್ನು ಹಾಗೂ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ದೇಶವನ್ನೇ ವಿರೋಧಿಸುತ್ತಿದೆ. ಸಾಕಷ್ಟು ಶ್ರಮಪಟ್ಟು ಲಸಿಕೆ ಕಂಡು ಹಿಡಿದ ವಿಜ್ಞಾನಿಗಳಿಗೆ ಅವಮಾನ ಮಾಡುತ್ತಿದೆ ಎಂದರು.</p>.<p>ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಇದೇ ತಿಂಗಳ 29ರಿಂದ ಫೆಬ್ರುವರಿ 15ರ ತನಕ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. 30ರಂದು ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 8ರಿಂದ ಏಪ್ರಿಲ್ 8ರ ತನಕ ಎರಡನೇ ಅವಧಿಯ ಬಜೆಟ್ ಅಧಿವೇಶನ ಜರುಗಲಿದೆ. ಫೆ. 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.</p>.<p>ಕರ್ನಾಟಕಕ್ಕೆ ಅಗತ್ಯವಾಗಿ ಬೇಕಾದ ಸೌಲಭ್ಯಗಳ ಆದ್ಯತೆ ಪಟ್ಟಿಯನ್ನು ಕೇಂದ್ರಕ್ಕೆ ನೀಡಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಯಲಿದೆ. ಕೋವಿಡ್ ಬಳಿಕ ಮೊದಲ ಸಲ ಪೂರ್ಣ ಪ್ರಮಾಣದಲ್ಲಿ ಸರ್ವಪಕ್ಷಗಳ ಸಭೆ ಜರುಗಲಿದೆ. ಪ್ರಶ್ನೋತ್ತರ ಅವಧಿಯೂ ಇರಲಿದೆ ಎಂದರು.</p>.<p>ಕೋವಿಡ್ ಲಸಿಕೆಯನ್ನು ಮೊದಲು ಪ್ರಧಾನಿ ತೆಗೆದುಕೊಳ್ಳಲಿ ಎಂದು ಕಾಂಗ್ರೆಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಮೋದಿ ಅವರನ್ನು ಹಾಗೂ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ದೇಶವನ್ನೇ ವಿರೋಧಿಸುತ್ತಿದೆ. ಸಾಕಷ್ಟು ಶ್ರಮಪಟ್ಟು ಲಸಿಕೆ ಕಂಡು ಹಿಡಿದ ವಿಜ್ಞಾನಿಗಳಿಗೆ ಅವಮಾನ ಮಾಡುತ್ತಿದೆ ಎಂದರು.</p>.<p>ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>