<p><strong>ಹುಬ್ಬಳ್ಳಿ</strong>: ‘ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ 42 ಒಳಪಂಗಡಗಳು ಒಗ್ಗಟ್ಟಾದರೆ ಮಾತ್ರ ಪ್ರಗತಿ ಸಾಧ್ಯ. ಸಮಾಜಕ್ಕೆ ನ್ಯಾಯ ಒದಗಿಸಲು ಚಿತ್ರದುರ್ಗದಲ್ಲಿ ಏಪ್ರಿಲ್ನಲ್ಲಿ ಸಮಾವೇಶ ಹಮ್ಮಿಕೊಳ್ಳೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಶನಿವಾರ ಇಲ್ಲಿ ಹೇಳಿದರು.</p>.<p>ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಹಿಂದುಳಿದ ವರ್ಗಗಳ ಪ್ರ–ವರ್ಗ 1 ಜನಾಂಗಗಳ ಒಕ್ಕೂಟ ಏರ್ಪಡಿಸಿದ್ದ ರಾಜ್ಯಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವದಲ್ಲಿ ಮಾತನಾಡಿದರು. </p>.<p>‘ಏ.15ರಿಂದ 30ರ ಒಳಗೆ ಸಮಾವೇಶ ನಡೆಸಲು ಸಮಾಜದ ಮುಖಂಡರು ಮುಂದಾಗಬೇಕು. ಮಠ ಸ್ಥಾಪನೆ, ಎಸ್ಸಿಗೆ ಸಮುದಾಯದ ಸೇರ್ಪಡೆ ಕುರಿತು ಚರ್ಚಿಸೋಣ. ಹಿಂದುಳಿದ ವರ್ಗಗಳ ಎಲ್ಲ ಮಠಾಧೀಶರನ್ನು ಸಮಾವೇಶಕ್ಕೆ ಆಹ್ವಾನಿಸೋಣ’ ಎಂದು ಸಲಹೆ ಮಾಡಿದರು. </p>.<p>‘ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ನಂತರ ಪ್ರತಿ ಜಿಲ್ಲೆಯಲ್ಲೂ ಅಲೆಮಾರಿಗಳ ಒಳಪಂಗಡಗಳನ್ನು ಗುರುತಿಸಲು ಪ್ರಯತ್ನಿಸುತ್ತಿದೆ. ಸಮಾಜದ ಸಂಘಟನೆಗಳಿಂದ, ಮುಖಂಡರಿಂದ ಸ್ಪಂದನೆ ಸಿಗುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ 42 ಒಳಪಂಗಡಗಳು ಒಗ್ಗಟ್ಟಾದರೆ ಮಾತ್ರ ಪ್ರಗತಿ ಸಾಧ್ಯ. ಸಮಾಜಕ್ಕೆ ನ್ಯಾಯ ಒದಗಿಸಲು ಚಿತ್ರದುರ್ಗದಲ್ಲಿ ಏಪ್ರಿಲ್ನಲ್ಲಿ ಸಮಾವೇಶ ಹಮ್ಮಿಕೊಳ್ಳೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಶನಿವಾರ ಇಲ್ಲಿ ಹೇಳಿದರು.</p>.<p>ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಹಿಂದುಳಿದ ವರ್ಗಗಳ ಪ್ರ–ವರ್ಗ 1 ಜನಾಂಗಗಳ ಒಕ್ಕೂಟ ಏರ್ಪಡಿಸಿದ್ದ ರಾಜ್ಯಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವದಲ್ಲಿ ಮಾತನಾಡಿದರು. </p>.<p>‘ಏ.15ರಿಂದ 30ರ ಒಳಗೆ ಸಮಾವೇಶ ನಡೆಸಲು ಸಮಾಜದ ಮುಖಂಡರು ಮುಂದಾಗಬೇಕು. ಮಠ ಸ್ಥಾಪನೆ, ಎಸ್ಸಿಗೆ ಸಮುದಾಯದ ಸೇರ್ಪಡೆ ಕುರಿತು ಚರ್ಚಿಸೋಣ. ಹಿಂದುಳಿದ ವರ್ಗಗಳ ಎಲ್ಲ ಮಠಾಧೀಶರನ್ನು ಸಮಾವೇಶಕ್ಕೆ ಆಹ್ವಾನಿಸೋಣ’ ಎಂದು ಸಲಹೆ ಮಾಡಿದರು. </p>.<p>‘ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ನಂತರ ಪ್ರತಿ ಜಿಲ್ಲೆಯಲ್ಲೂ ಅಲೆಮಾರಿಗಳ ಒಳಪಂಗಡಗಳನ್ನು ಗುರುತಿಸಲು ಪ್ರಯತ್ನಿಸುತ್ತಿದೆ. ಸಮಾಜದ ಸಂಘಟನೆಗಳಿಂದ, ಮುಖಂಡರಿಂದ ಸ್ಪಂದನೆ ಸಿಗುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>