ಹುಬ್ಬಳ್ಳಿ: ಇಲ್ಲಿನ ಉಣಕಲ್ ಸಿದ್ದಪ್ಪಜ್ಜನ ರಥೋತ್ಸವ ಶನಿವಾರ ಸಂಜೆಸಡಗರದಿಂದ ನಡೆಯಿತು.
ಕೋವಿಡ್ ಕಾರಣಕ್ಕಾಗಿ ಹಿಂದಿನ ಎರಡು ವರ್ಷ ಈ ವರ್ಷದಷ್ಟು ಸಂಭ್ರಮದಿಂದ ಜಾತ್ರೆ ನಡೆದಿರಲಿಲ್ಲ.
ಬೆಳಿಗ್ಗೆಯಿಂದಲೇ ಮಠದ ಕೈಲಾಸ ಮಂಟಪದಲ್ಲಿ ಸಾಮೂಹಿಕ ವಿವಾಹ ಜರುಗಿದವು. ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಹಾಗೂ ದೇವರ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸಾವಿರಾರು ಜನ ಭಕ್ತರು ಸಾಕ್ಷಿಯಾದರು