‘ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಆ ಪಕ್ಷದ ಆಂತರಿಕ ವಿಚಾರ. ಆದರೆ, ಕರೊನಾ ಸಂದರ್ಭದಲ್ಲಿ ಇಂಥ ಚರ್ಚೆ ನಡೆಸುವುದು ಸರಿಯಲ್ಲ. ಸರ್ಕಾರದ ಸಚಿವರು ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಒಬ್ಬೊಬ್ಬ ಮಂತ್ರಿ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ರೈತರಿಗೆ ಸರ್ಕಾರ ಹಣ ನೀಡುತ್ತಿದೆ. ಆದರೆ, ಅದರ ಮೂರು ಪಟ್ಟು ಹಣವನ್ನು ಬೇರೆ ಕಡೆಯಿಂದ ವಾಪಸ್ ಪಡೆಯುತ್ತಿದೆ. ಇದು ಕೇವಲ ಘೋಷಣೆ ಮಾಡುವ ಸರ್ಕಾರವಾಗಿದೆ’ ಎಂದು ಟೀಕಿಸಿದರು.