<p><strong>ಉಪ್ಪಿನಬೆಟಗೇರಿ: </strong>ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಉಪ್ಪಿನಬೆಟಗೇರಿಯ ಶತಮಾನೋತ್ತರ ಶಾಲೆಯ ಕೊಡುಗೆ ಸ್ಮರಣೀಯವಾದದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಶಾಲೆಯ ಶತಮಾನೋತ್ತರ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲೆ ಆರಂಭವಾಗಿ 157 ವರ್ಷಗಳಾಗಿದ್ದು, ಹಳೆಯ ವಿದ್ಯಾರ್ಥಿಗಳು ಶತಮಾನೋತ್ತರ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಅಭಿನಂದನೀಯ. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು(ಎನ್ಇಪಿ) ಜಾರಿಗೆ ತಂದಿದ್ದು, ಇದರಲ್ಲಿ ಯುವಕರ ಕೌಶಲಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಎನ್ಇಪಿ ಸಹಕಾರಿ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಶಾಲೆಯ ಹಿಂಭಾಗದಲ್ಲಿರುವ ನಾಲ್ಕು ಎಕರೆ ಜಾಗವನ್ನು ಶೈಕ್ಷಣಿಕ ಚಟುವಟಿಕೆಗೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಮಾತನಾಡಿದರು. ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಗ್ರಾಮಸ್ಥರು, ಶಿಕ್ಷಕರು ಮನವಿ ಪತ್ರಗಳನ್ನು ಸಲ್ಲಿಸಿದರು.</p>.<p>ಇದಕ್ಕೂ ಮುನ್ನ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಯಿರಾಬಾನು ಲಾಲ್ಮೀಯಾ ಧ್ವಜಾರೋಹಣ ನೆರವೇರಿಸಿದರು. ಶತಮಾನೋತ್ತರ ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷಕ ವೀರಣ್ಣ ಪರಾಂಡೆ ಭುವನೇಶ್ವರಿದೇವಿ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು. </p>.<p> ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ, ಗಿರೀಶ ಪದಕಿ, ಸುರೇಶ ಹುಗ್ಗಿ, ವಿದ್ಯಾಲೋಲಿ, ಕಲ್ಲಪ್ಪ ಪುಡಕಲಕಟ್ಟಿ, ಚನಬಸಪ್ಪ ಮಸೂತಿ, ರಾಮಲಿಂಗಪ್ಪ ನವಲಗುಂದ, ಶಶಿಮೌಳಿ ಕಲಕರ್ಣಿ, ಗುರು ತಿಗಡಿ, ಕಾಶಪ್ಪ ದೊಡವಾಡ, ರವೀಂದ್ರ ಯಲಿಗಾರ, ಮುಖ್ಯಶಿಕ್ಷಕ ಎಂ.ಎಂ. ದೊಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ: </strong>ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಉಪ್ಪಿನಬೆಟಗೇರಿಯ ಶತಮಾನೋತ್ತರ ಶಾಲೆಯ ಕೊಡುಗೆ ಸ್ಮರಣೀಯವಾದದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಶಾಲೆಯ ಶತಮಾನೋತ್ತರ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲೆ ಆರಂಭವಾಗಿ 157 ವರ್ಷಗಳಾಗಿದ್ದು, ಹಳೆಯ ವಿದ್ಯಾರ್ಥಿಗಳು ಶತಮಾನೋತ್ತರ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಅಭಿನಂದನೀಯ. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು(ಎನ್ಇಪಿ) ಜಾರಿಗೆ ತಂದಿದ್ದು, ಇದರಲ್ಲಿ ಯುವಕರ ಕೌಶಲಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಎನ್ಇಪಿ ಸಹಕಾರಿ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಶಾಲೆಯ ಹಿಂಭಾಗದಲ್ಲಿರುವ ನಾಲ್ಕು ಎಕರೆ ಜಾಗವನ್ನು ಶೈಕ್ಷಣಿಕ ಚಟುವಟಿಕೆಗೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಮಾತನಾಡಿದರು. ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಗ್ರಾಮಸ್ಥರು, ಶಿಕ್ಷಕರು ಮನವಿ ಪತ್ರಗಳನ್ನು ಸಲ್ಲಿಸಿದರು.</p>.<p>ಇದಕ್ಕೂ ಮುನ್ನ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಯಿರಾಬಾನು ಲಾಲ್ಮೀಯಾ ಧ್ವಜಾರೋಹಣ ನೆರವೇರಿಸಿದರು. ಶತಮಾನೋತ್ತರ ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷಕ ವೀರಣ್ಣ ಪರಾಂಡೆ ಭುವನೇಶ್ವರಿದೇವಿ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು. </p>.<p> ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ, ಗಿರೀಶ ಪದಕಿ, ಸುರೇಶ ಹುಗ್ಗಿ, ವಿದ್ಯಾಲೋಲಿ, ಕಲ್ಲಪ್ಪ ಪುಡಕಲಕಟ್ಟಿ, ಚನಬಸಪ್ಪ ಮಸೂತಿ, ರಾಮಲಿಂಗಪ್ಪ ನವಲಗುಂದ, ಶಶಿಮೌಳಿ ಕಲಕರ್ಣಿ, ಗುರು ತಿಗಡಿ, ಕಾಶಪ್ಪ ದೊಡವಾಡ, ರವೀಂದ್ರ ಯಲಿಗಾರ, ಮುಖ್ಯಶಿಕ್ಷಕ ಎಂ.ಎಂ. ದೊಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>