<p><strong>ಧಾರವಾಡ</strong>: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ್ಯಾಂಕ್ ಪಡೆದಿದ್ದಾರೆ. </p><p>ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. </p><p>‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ ತಂದೆ ಸದಾ ಹೇಳುತ್ತಿದ್ದರು. ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕು ಎಂಬ ಗುರಿ ಚಿಕ್ಕಂದಿನಿಂದಲೂ ಇತ್ತು. ಅದಕ್ಕಾಗಿ ತಯಾರಿ ನಡೆಸಿದ್ದೆ, ಕನಸು ಸಾಕಾರವಾಗಿದೆ’ ಎಂದು ಸೌಭಾಗ್ಯ ‘ಪ್ರಜಾವಾಣಿ’ಗೆ ತಿಳಿಸಿದರು. </p><p>‘ಯಾವುದೇ ಕೇಂದ್ರದಲ್ಲಿ ಕೋಚಿಂಗ್ ಪಡೆದಿರಲಿಲ್ಲ. ಆನ್ಲೈನ್ ಮಾಕ್ ಟೆಸ್ಟ್ ಸರಣಿ ಅಟೆಂಡ್ ಮಾಡಿದ್ದೆ ಅಷ್ಟೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬೋಧಕಿ ಅಶ್ವಿನಿ ಎಂ.ಅವರು ನನ್ನನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಲು ಪ್ರೋತ್ಸಾಹ ನೀಡಿದರು. </p><p>ಪರೀಕ್ಷೆ ತಯಾರಿಗೆ ಅವರೇ ಎಲ್ಲ ರೀತಿಯ ಮಾರ್ಗದರ್ಶನ ನೀಡಿದರು’ ಎಂದು ತಿಳಿಸಿದರು. </p><p>ಸೌಭಾಗ್ಯ ಅವರು ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 98 ಹಾಗೂ ಬಿ.ಎಸ್ಸಿ (ಕೃಷಿ) ಪದವಿಯಲ್ಲಿ ಶೇ 90 (ಸಿಜಿಪಿಎ 9.05) ಅಂಕ ಪಡೆದಿದ್ದಾರೆ.</p>.UPSC Result 2023 | 180 ಐಎಎಸ್; 200 ಐಪಿಎಸ್: ಪಟ್ಟಿ ಇಲ್ಲಿದೆ.ಪ್ರಜಾವಾಣಿ ‘ಯುವ ಸಾಧಕ’ ಶಾಂತಪ್ಪ ಕುರುಬರಗೆ ಯುಪಿಎಸ್ಸಿಯಲ್ಲಿ 644ನೇ ರ್ಯಾಂಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ್ಯಾಂಕ್ ಪಡೆದಿದ್ದಾರೆ. </p><p>ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. </p><p>‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ ತಂದೆ ಸದಾ ಹೇಳುತ್ತಿದ್ದರು. ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕು ಎಂಬ ಗುರಿ ಚಿಕ್ಕಂದಿನಿಂದಲೂ ಇತ್ತು. ಅದಕ್ಕಾಗಿ ತಯಾರಿ ನಡೆಸಿದ್ದೆ, ಕನಸು ಸಾಕಾರವಾಗಿದೆ’ ಎಂದು ಸೌಭಾಗ್ಯ ‘ಪ್ರಜಾವಾಣಿ’ಗೆ ತಿಳಿಸಿದರು. </p><p>‘ಯಾವುದೇ ಕೇಂದ್ರದಲ್ಲಿ ಕೋಚಿಂಗ್ ಪಡೆದಿರಲಿಲ್ಲ. ಆನ್ಲೈನ್ ಮಾಕ್ ಟೆಸ್ಟ್ ಸರಣಿ ಅಟೆಂಡ್ ಮಾಡಿದ್ದೆ ಅಷ್ಟೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬೋಧಕಿ ಅಶ್ವಿನಿ ಎಂ.ಅವರು ನನ್ನನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಲು ಪ್ರೋತ್ಸಾಹ ನೀಡಿದರು. </p><p>ಪರೀಕ್ಷೆ ತಯಾರಿಗೆ ಅವರೇ ಎಲ್ಲ ರೀತಿಯ ಮಾರ್ಗದರ್ಶನ ನೀಡಿದರು’ ಎಂದು ತಿಳಿಸಿದರು. </p><p>ಸೌಭಾಗ್ಯ ಅವರು ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 98 ಹಾಗೂ ಬಿ.ಎಸ್ಸಿ (ಕೃಷಿ) ಪದವಿಯಲ್ಲಿ ಶೇ 90 (ಸಿಜಿಪಿಎ 9.05) ಅಂಕ ಪಡೆದಿದ್ದಾರೆ.</p>.UPSC Result 2023 | 180 ಐಎಎಸ್; 200 ಐಪಿಎಸ್: ಪಟ್ಟಿ ಇಲ್ಲಿದೆ.ಪ್ರಜಾವಾಣಿ ‘ಯುವ ಸಾಧಕ’ ಶಾಂತಪ್ಪ ಕುರುಬರಗೆ ಯುಪಿಎಸ್ಸಿಯಲ್ಲಿ 644ನೇ ರ್ಯಾಂಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>