<p><strong>ಕುಂದಗೋಳ:</strong> ತಾಲ್ಲೂಕಿನಲ್ಲಿ ರೈತರಿಗೆ ಸಂಮರ್ಪಕವಾಗಿ ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಹಾಗೂ ಸರ್ಕಾರದ ದರಕ್ಕಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಮಂಗಳವಾರ ಪಟ್ಟಣದ ಡಿ.ಪಿ.ಪಿ ಸೊಸೈಟಿ ಎದುರು ರೈತರು ಪ್ರತಿಭಟನೆ ಮಾಡಿದರು.</p>.<p>ರೈತ ಮುಖಂಡ ಹಾಗೂ ಪ.ಪಂ ಸದಸ್ಯ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ರೈತರಿಗೆ ಸರಿಯಾಗಿ ಗೊಬ್ಬರ ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ ಸೊಸೈಟಿ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಯವರು ಪ್ರತ್ಯೇಕವಾಗಿ ಶೇಖರಣೆ ಮಾಡಿಟ್ಟುಕೊಂಡು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. </p>.<p>ಕೆಲ ಸೊಸೈಟಿ ಹಾಗೂ ಅಂಗಡಿಗಳಲ್ಲಿ ಗೊಬ್ಬರದ ದರಪಟ್ಟಿ ಹಾಕಿಲ್ಲ. ದರಪಟ್ಟಿ ಹಾಕಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ಇದ್ದರೂ ನಿರ್ಲಕ್ಷಿಸಲಾಗಿದೆ. ಹೀಗೆ ಮುಂದುವರೆದರೆ ಸಂಬಂಧಿಸಿದ ಕೃಷಿ ಇಲಾಖೆ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. </p>.<p>ಸ್ಥಳಕ್ಕೆ ಆಗಮಿಸಿದ ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಮೆಣಸಿನಕಾಯಿ ಅವರೊಂದಿಗೆ ಕೆಲ ರೈತರು ವಾಗ್ವಾದ ನಡೆಸಿದರು.</p>.<p>ಸರ್ಕಾರ ಸೂಚಿಸಿದ ದರಲ್ಲಿಯೇ ಗೊಬ್ಬರ ಮಾರಾಟ ಮಾಡಬೇಕು ಎಂದು ಕೃಷಿ ನಿರ್ದೇಶಕರು, ಸೊಸೈಟಿ, ಅಂಗಡಿಯವರಿಗೆ ಸೂಚಿಸಿದರು. </p>.<p>ಶೇಖಣ್ಣ ಬಾಳಿಕಾಯಿ. ಮಲ್ಲಿಕಾರ್ಜುನ ಕಿರೇಸೂರ, ಮಾಹದೇವಪ್ಪ ಬಮ್ಮಸಮುದ್ರ, ಸಿದ್ದು ನಾಗರಹಳ್ಳಿ, ಸುಭಾಷ್ ಬಂಡಿವಾಡ, ಪರಮೇಶ್ವರ ಕಿರೇಸೂರ, ಪಕ್ಕೀರಯ್ಯ ನಾವಳ್ಳಿಮಠ, ಲಕ್ಷಣ ತಳವಾರ, ಟಾಕಪ್ಪ ಬಂಡಿವಾಡ, ನಿಂಗಪ್ಪ ಉಮಚಗಿ, ಶೇಕಪ್ಪ ವಟವಟಿ ಸೇರಿದಂತೆ ಅನೇಕ ರೈತರು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ:</strong> ತಾಲ್ಲೂಕಿನಲ್ಲಿ ರೈತರಿಗೆ ಸಂಮರ್ಪಕವಾಗಿ ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಹಾಗೂ ಸರ್ಕಾರದ ದರಕ್ಕಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಮಂಗಳವಾರ ಪಟ್ಟಣದ ಡಿ.ಪಿ.ಪಿ ಸೊಸೈಟಿ ಎದುರು ರೈತರು ಪ್ರತಿಭಟನೆ ಮಾಡಿದರು.</p>.<p>ರೈತ ಮುಖಂಡ ಹಾಗೂ ಪ.ಪಂ ಸದಸ್ಯ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ರೈತರಿಗೆ ಸರಿಯಾಗಿ ಗೊಬ್ಬರ ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ ಸೊಸೈಟಿ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಯವರು ಪ್ರತ್ಯೇಕವಾಗಿ ಶೇಖರಣೆ ಮಾಡಿಟ್ಟುಕೊಂಡು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. </p>.<p>ಕೆಲ ಸೊಸೈಟಿ ಹಾಗೂ ಅಂಗಡಿಗಳಲ್ಲಿ ಗೊಬ್ಬರದ ದರಪಟ್ಟಿ ಹಾಕಿಲ್ಲ. ದರಪಟ್ಟಿ ಹಾಕಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ಇದ್ದರೂ ನಿರ್ಲಕ್ಷಿಸಲಾಗಿದೆ. ಹೀಗೆ ಮುಂದುವರೆದರೆ ಸಂಬಂಧಿಸಿದ ಕೃಷಿ ಇಲಾಖೆ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. </p>.<p>ಸ್ಥಳಕ್ಕೆ ಆಗಮಿಸಿದ ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಮೆಣಸಿನಕಾಯಿ ಅವರೊಂದಿಗೆ ಕೆಲ ರೈತರು ವಾಗ್ವಾದ ನಡೆಸಿದರು.</p>.<p>ಸರ್ಕಾರ ಸೂಚಿಸಿದ ದರಲ್ಲಿಯೇ ಗೊಬ್ಬರ ಮಾರಾಟ ಮಾಡಬೇಕು ಎಂದು ಕೃಷಿ ನಿರ್ದೇಶಕರು, ಸೊಸೈಟಿ, ಅಂಗಡಿಯವರಿಗೆ ಸೂಚಿಸಿದರು. </p>.<p>ಶೇಖಣ್ಣ ಬಾಳಿಕಾಯಿ. ಮಲ್ಲಿಕಾರ್ಜುನ ಕಿರೇಸೂರ, ಮಾಹದೇವಪ್ಪ ಬಮ್ಮಸಮುದ್ರ, ಸಿದ್ದು ನಾಗರಹಳ್ಳಿ, ಸುಭಾಷ್ ಬಂಡಿವಾಡ, ಪರಮೇಶ್ವರ ಕಿರೇಸೂರ, ಪಕ್ಕೀರಯ್ಯ ನಾವಳ್ಳಿಮಠ, ಲಕ್ಷಣ ತಳವಾರ, ಟಾಕಪ್ಪ ಬಂಡಿವಾಡ, ನಿಂಗಪ್ಪ ಉಮಚಗಿ, ಶೇಕಪ್ಪ ವಟವಟಿ ಸೇರಿದಂತೆ ಅನೇಕ ರೈತರು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>