ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ಇಪಿ ಹಿಂಪಡೆಯುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ವಿಷಾದನೀಯ. ಇದೀಗ ಎಸ್ಇಪಿ ರಚನೆ ಮಾಡಿ ಅನ್ಯ ರಾಜ್ಯದವರನ್ನು ಅದಕ್ಕೆ ನೇಮಕ ಮಾಡಿರುವ ಕ್ರಮ ಸರಿಯಲ್ಲ. ರಾಜ್ಯದ ಸಂಸ್ಕೃತಿ, ಶೈಕ್ಷಣಿಕ ಅರಿವು ಇದ್ದವರನ್ನು ಅದರಲ್ಲಿ ನೇಮಕ ಮಾಡಿಕೊಳ್ಳಬೇಕಿತ್ತು. ಒಟ್ಟಾರೆ ಶಿಕ್ಷಣ ನೀತಿಯಲ್ಲಿ ರಾಜಕೀಯವನ್ನು ಬೆರೆಸುತ್ತಿರುವ ಸರ್ಕಾರದ ಕ್ರಮ ಸರಿಯಾಗಿಲ್ಲ. ಸಿಬಿಎಸ್ಇ ಪಠ್ಯಕ್ರಮ ಕೂಡಾ ಕೇಂದ್ರ ಸರ್ಕಾರ ನಿರ್ಧರಿತ ಪಠ್ಯವಾಗಿದ್ದು, ರಾಜ್ಯ ಸರ್ಕಾರದ ಸಚಿವರು ಹೊಂದಿದ ಶಿಕ್ಷಣ ಸಂಸ್ಥೆಗಳಲ್ಲಿ ಅದನ್ನು ಅಳವಡಿಸಿಕೊಳ್ಳಲಾಗಿದೆ. ಎನ್ಇಪಿ ಮಾತ್ರ ವಿರೋಧ ಮಾಡುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿದರು.