<p><strong>ಧಾರವಾಡ</strong>: ಗ್ರಾಮೀಣ ಸೊಗಡಿನ ಜನಪದ ಕಲೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ ಒಡ್ಡೀನ ಹೇಳಿದರು. </p>.<p>ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪುಡಕಲಕಟ್ಟಿಯ ಆತ್ಮಾನಂದ ಜನಪದ ಮಹಿಳಾ ಕಲಾ ಸಂಘದ ಎರಡನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಮ್ಮ ಸಂಸ್ಕೃತಿಯನ್ನು ಜನಮಾನಸಕ್ಕೆ ತಲುಪಿಸುವಲ್ಲಿ ಜನಪದ ಸಾಹಿತ್ಯ ಪ್ರಮುಖ ಪಾತ್ರವಹಿಸುತ್ತಿದೆ.<br> ಜನಪದ ಸಾಹಿತ್ಯಕ್ಕೆ ನಮ್ಮ ಬದುಕನ್ನು ತಿದ್ದಿ ಸಂಸ್ಕಾರಗೊಳಿಸುವ ಶಕ್ತಿ ಇದೆ. ಈ ಸಾಹಿತ್ಯವನ್ನು ವೈಜ್ಞಾನಿಕ ನೆಲೆಗಟ್ಟಿನ ಮೇಲೆ ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಪುಡಕಲಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಬುಡರಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸತೀಶತುರಮರಿ, ಮಹಾಬಳೇಶ್ವರ ಕೋರಕೊಪ್ಪ, ಹಿಜ ನಪದಕಲಾವಿದರಾದ ಎಸ್. ಎನ್. ಬಿದರಳ್ಳಿ, ಮಡಿವಾಳಪ್ಪ ಸಿಂದೋಗಿ, ಗಿರೀಶರಡ್ಡೇರ, ಸಾವಕ್ಕ ಲೋಕೊರ, ಶಿಲ್ಪಾ ಚಂದರಗಿ, ಚನ್ನವ್ವ ಹಡಪದ, ಮಂಜುಳಾ ಗಾಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಗ್ರಾಮೀಣ ಸೊಗಡಿನ ಜನಪದ ಕಲೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ ಒಡ್ಡೀನ ಹೇಳಿದರು. </p>.<p>ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪುಡಕಲಕಟ್ಟಿಯ ಆತ್ಮಾನಂದ ಜನಪದ ಮಹಿಳಾ ಕಲಾ ಸಂಘದ ಎರಡನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಮ್ಮ ಸಂಸ್ಕೃತಿಯನ್ನು ಜನಮಾನಸಕ್ಕೆ ತಲುಪಿಸುವಲ್ಲಿ ಜನಪದ ಸಾಹಿತ್ಯ ಪ್ರಮುಖ ಪಾತ್ರವಹಿಸುತ್ತಿದೆ.<br> ಜನಪದ ಸಾಹಿತ್ಯಕ್ಕೆ ನಮ್ಮ ಬದುಕನ್ನು ತಿದ್ದಿ ಸಂಸ್ಕಾರಗೊಳಿಸುವ ಶಕ್ತಿ ಇದೆ. ಈ ಸಾಹಿತ್ಯವನ್ನು ವೈಜ್ಞಾನಿಕ ನೆಲೆಗಟ್ಟಿನ ಮೇಲೆ ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಪುಡಕಲಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಬುಡರಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸತೀಶತುರಮರಿ, ಮಹಾಬಳೇಶ್ವರ ಕೋರಕೊಪ್ಪ, ಹಿಜ ನಪದಕಲಾವಿದರಾದ ಎಸ್. ಎನ್. ಬಿದರಳ್ಳಿ, ಮಡಿವಾಳಪ್ಪ ಸಿಂದೋಗಿ, ಗಿರೀಶರಡ್ಡೇರ, ಸಾವಕ್ಕ ಲೋಕೊರ, ಶಿಲ್ಪಾ ಚಂದರಗಿ, ಚನ್ನವ್ವ ಹಡಪದ, ಮಂಜುಳಾ ಗಾಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>