<p><strong>ಧಾರವಾಡ:</strong> ‘ರೈತರು ಕೃಷಿ ತೊರೆದು ಊರುಬಿಟ್ಟು ಹೋಗದಂತೆ ಮಾಡಬೇಕು. ಕೃಷಿ ರಕ್ಷಿಸುವ ಕಾರ್ಯಕ್ರಮಗಳನ್ನು ಸರ್ಕಾರಗಳು ರೂಪಿಸಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಕೃಷಿ ಮತ್ತು ಪರಿಸರ ಮಂಟಪದ ವತಿಯಿಂದ ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಭಾರತದ ಕೃಷಿ ಬಿಕ್ಕಟ್ಟುಗಳು’ ಉಪನ್ಯಾಸ ಮಾಲಿಕೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಕ್ಷೇತ್ರವು ಭಾರತದ ಜೀವನಾಡಿ. ಹೊಲಗದ್ದೆಗಳಲ್ಲಿನ ಮಣ್ಣಿನಲ್ಲಿ ದೇಶದ ಭವಿಷ್ಯ ಇದೆ. ಮಣ್ಣನ್ನು ರಕ್ಷಣೆ ಮಾಡಬೇಕು. ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ನೀಡಬೇಕು’ ಎಂದು ಹೇಳಿದರು.</p>.<p>‘ರೈತರು ಹೊಲಗದ್ದೆಗಳಲ್ಲಿ ಕೆಲಸ ಮಾಡುತ್ತಾರೆ. ದೇಶದ ಸಂಸ್ಕೃತಿ, ಪರಂಪರೆ ಉಳಿಸಿದ್ದಾರೆ. ಅವರಿಗೆ ಹವಾಮಾನ ಮಾಹಿತಿ ನೀಡುವುದು, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಸ್ವಾತಂತ್ರ್ಯ ಸಂದಾಗ ಕೃಷಿ ಉತ್ಪಾದನೆ ಕಡಿಮೆ ಇತ್ತು. ಈಗ ಹೆಚ್ಚಾಗಿದೆ, ರಫ್ತು ಮಾಡುವ ಹಂತಕ್ಕೆ ತಲುಪಿಸಿದ್ದೇವೆ’ ಎಂದರು.</p>.<p>‘ಬೀಳು ಬಿದ್ದಿರುವ ಜಮೀನುಗಳ ಮಾಲೀಕರನ್ನು ಪತ್ತೆ ಹಚ್ಚಬೇಕು. ಆ ಜಮೀನುಗಳ ಉಳುಮೆ ನಿಟ್ಟಿನಲ್ಲಿ ಕ್ರಮ ವಹಿಸುವ ಅಗತ್ಯ ಇದೆ. ಕೃಷಿ ಕಡೆಗೆ ಯುವಜನರಿಗೆ ಒಲವು ಬೆಳೆಸಬೇಕು. ಕೃಷಿಯಲ್ಲಿ ತೊಡಗಿಸಬೇಕು’ ಎಂದರು.</p>.<p>ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಬಸವಪ್ರಭು ಹೊರಕೇರಿ, ಪ್ರಧಾನ ಕಾರ್ಯದರ್ಶಿ ಶಂಕರಹಲಗತ್ತಿ, ಗುರು ಹಿರೇಮಠ ಇದ್ದರು.</p>.<div><blockquote>ಕೃಷಿ ಕ್ಷೇತ್ರದಲ್ಲಿನ ಬಿಕ್ಕಟ್ಟುಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕು. ಕಾರಣಗಳನ್ನು ತಿಳಿಯಬೇಕು. ಪರಿಹಾರಗಳನ್ನು ರೂಪಿಸಬೇಕು. ರೈತರಿಗೆ ಕೃಷಿಯಿಂದ ಲಾಭ ಬರುವಂತೆ ಮಾಡಬೇಕು</blockquote><span class="attribution"> ರಾಜೇಂದ್ರ ಪೊದ್ದಾರ್ ನಿವೃತ್ತ ನಿರ್ದೇಶಕ ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ರೈತರು ಕೃಷಿ ತೊರೆದು ಊರುಬಿಟ್ಟು ಹೋಗದಂತೆ ಮಾಡಬೇಕು. ಕೃಷಿ ರಕ್ಷಿಸುವ ಕಾರ್ಯಕ್ರಮಗಳನ್ನು ಸರ್ಕಾರಗಳು ರೂಪಿಸಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಕೃಷಿ ಮತ್ತು ಪರಿಸರ ಮಂಟಪದ ವತಿಯಿಂದ ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಭಾರತದ ಕೃಷಿ ಬಿಕ್ಕಟ್ಟುಗಳು’ ಉಪನ್ಯಾಸ ಮಾಲಿಕೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಕ್ಷೇತ್ರವು ಭಾರತದ ಜೀವನಾಡಿ. ಹೊಲಗದ್ದೆಗಳಲ್ಲಿನ ಮಣ್ಣಿನಲ್ಲಿ ದೇಶದ ಭವಿಷ್ಯ ಇದೆ. ಮಣ್ಣನ್ನು ರಕ್ಷಣೆ ಮಾಡಬೇಕು. ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ನೀಡಬೇಕು’ ಎಂದು ಹೇಳಿದರು.</p>.<p>‘ರೈತರು ಹೊಲಗದ್ದೆಗಳಲ್ಲಿ ಕೆಲಸ ಮಾಡುತ್ತಾರೆ. ದೇಶದ ಸಂಸ್ಕೃತಿ, ಪರಂಪರೆ ಉಳಿಸಿದ್ದಾರೆ. ಅವರಿಗೆ ಹವಾಮಾನ ಮಾಹಿತಿ ನೀಡುವುದು, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಸ್ವಾತಂತ್ರ್ಯ ಸಂದಾಗ ಕೃಷಿ ಉತ್ಪಾದನೆ ಕಡಿಮೆ ಇತ್ತು. ಈಗ ಹೆಚ್ಚಾಗಿದೆ, ರಫ್ತು ಮಾಡುವ ಹಂತಕ್ಕೆ ತಲುಪಿಸಿದ್ದೇವೆ’ ಎಂದರು.</p>.<p>‘ಬೀಳು ಬಿದ್ದಿರುವ ಜಮೀನುಗಳ ಮಾಲೀಕರನ್ನು ಪತ್ತೆ ಹಚ್ಚಬೇಕು. ಆ ಜಮೀನುಗಳ ಉಳುಮೆ ನಿಟ್ಟಿನಲ್ಲಿ ಕ್ರಮ ವಹಿಸುವ ಅಗತ್ಯ ಇದೆ. ಕೃಷಿ ಕಡೆಗೆ ಯುವಜನರಿಗೆ ಒಲವು ಬೆಳೆಸಬೇಕು. ಕೃಷಿಯಲ್ಲಿ ತೊಡಗಿಸಬೇಕು’ ಎಂದರು.</p>.<p>ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಬಸವಪ್ರಭು ಹೊರಕೇರಿ, ಪ್ರಧಾನ ಕಾರ್ಯದರ್ಶಿ ಶಂಕರಹಲಗತ್ತಿ, ಗುರು ಹಿರೇಮಠ ಇದ್ದರು.</p>.<div><blockquote>ಕೃಷಿ ಕ್ಷೇತ್ರದಲ್ಲಿನ ಬಿಕ್ಕಟ್ಟುಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕು. ಕಾರಣಗಳನ್ನು ತಿಳಿಯಬೇಕು. ಪರಿಹಾರಗಳನ್ನು ರೂಪಿಸಬೇಕು. ರೈತರಿಗೆ ಕೃಷಿಯಿಂದ ಲಾಭ ಬರುವಂತೆ ಮಾಡಬೇಕು</blockquote><span class="attribution"> ರಾಜೇಂದ್ರ ಪೊದ್ದಾರ್ ನಿವೃತ್ತ ನಿರ್ದೇಶಕ ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>