ಬಯಲುಸೀಮೆ ಪ್ರದೇಶಾಭಿವೃದ್ಧಿಮಂಡಳಿ ಅಧ್ಯಕ್ಷ ಕಲ್ಲಹಳ್ಳಿ ದೇವರಾಜ್ ಮಾತನಾಡಿ,‘ 35 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನಗಾಗಲಿ, ನಿಂಗಪ್ಪ, ದೀಪಕ್ ಹಾಗೂ ಶಾಸಕ ಕೆ.ಎನ್.ರಾಜಣ್ಣ ಅವರ ಮಗ ರಾಜೇಂದ್ರ ಈ ನಾಲ್ವರಲ್ಲಿ ಯಾರಿಗಾದರೂ ಟಿಕೆಟ್ ಕೊಡಿ. ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುತ್ತೇವೆ. ಹೊರಗಿನವರಿಗೆ ಮಣೆ ಹಾಕಬಾರದು ಎಂದು ಮನವಿ ಮಾಡಿದ್ದರೂ ನಮ್ಮ ಮನವಿಗೆ ಬೆಲೆ ಕೊಟ್ಟಿಲ್ಲ ಎಂದು ಟೀಕಿಸಿದರು.