ಪಟೇಲ್ ಅವರ ಜನ್ಮದಿನದ ಅಂಗವಾಗಿ ಕಾಲೇಜಿನಲ್ಲಿ ಸೋಮವಾರ ನಡೆದ ಏಕತಾ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಧುನಿಕ ಭಾರತಕ್ಕೆ ಪಟೇಲ್ ಅವರು ಮಹತ್ತರ ಕೊಡುಗೆ ನೀಡಿದರು. ರಾಷ್ಟ್ರೀಯ ಏಕೀಕರಣಕ್ಕೆ ಅವರ ದೂರದೃಷ್ಟಿ ಮತ್ತು ಕಾರ್ಯದಕ್ಷತೆಯೇ ಕಾರಣ. ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದಬೇಕು. ಅವರು ತತ್ವಾದರ್ಶನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.