<p><strong>ಹುಬ್ಬಳ್ಳಿ</strong>: ಬೆಳಗಾವಿ–ಬೆಂಗಳೂರು ನಡುವೆ ಸಂಚರಿಸುವ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಭಾನುವಾರ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಣ್ಯರು ಸ್ವಾಗತಿಸಿದರು. </p>.<p>ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ‘ಬೆಂಗಳೂರು–ಧಾರವಾಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸಿದಾಗ, ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂಬ ಬೇಡಿಕೆ ಇತ್ತು. ಆದರೆ, ಆ ಸಮಯದಲ್ಲಿ ಅದು ಸಾಧ್ಯವಾಗಿರಲಿಲ್ಲ. ಈಗ ಮೂಲಸೌಕರ್ಯ ಸುಧಾರಿಸಿ ಹೊಸ ರೈಲನ್ನು ಬೆಳಗಾವಿಯವರೆಗೆ ಓಡಿಸಲಾಗುತ್ತಿದೆ’ ಎಂದರು.</p>.<p>‘ವಂದೇ ಭಾರತ್ ನೂತನ ರೈಲು ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಹುಬ್ಬಳ್ಳಿಗೆ 7.30ಕ್ಕೆ ತಲುಪುತ್ತದೆ. ಬೆಳಗಾವಿಯಿಂದ ಬೆಂಗಳೂರಿನ ಪ್ರಯಾಣಕ್ಕೆ ಸಾಮಾನ್ಯ ರೈಲಿಗಿಂತ ಎಂಬತ್ತು ನಿಮಿಷ ಉಳಿತಾಯವಾಗಲಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದ ಜನರು, ಉದ್ಯಮಿಗಳ ಓಡಾಟಕ್ಕೆ ಅನುಕೂಲವಾಗಿದೆ’ ಎಂದು ಹೇಳಿದರು.</p>.<p>‘ರೈಲುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಂಟು ಸಾವಿರ ಕೋಟಿ ರೂಪಾಯಿ ವಿನಿಯೋಗಿಸಿದೆ. ಶೇ 99ರಷ್ಟು ಹಳಿಗಳು ವಿದ್ಯುದ್ದೀಕರಣವಾಗಿವೆ. ದಾವಣಗೆರೆ–ತುಮಕೂರು ಮಾರ್ಗ ವಿದ್ಯುದ್ದೀಕರಣವಾದರೆ ರೈಲಿನ ವೇಗ ಮತ್ತಷ್ಟು ಹೆಚ್ಚಲಿದೆ. ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ’ ಎಂದರು.</p>.<p>‘ಅರಣ್ಯ ಇಲಾಖೆ ಸಲಹೆ ಪ್ರಕಾರ ಅಂಕೋಲಾ–ಹುಬ್ಬಳ್ಳಿ ರೈಲು ಮಾರ್ಗಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ, ಉಪ ಮೇಯರ್ ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಗುಂಡೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಬೆಳಗಾವಿ–ಬೆಂಗಳೂರು ನಡುವೆ ಸಂಚರಿಸುವ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಭಾನುವಾರ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಣ್ಯರು ಸ್ವಾಗತಿಸಿದರು. </p>.<p>ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ‘ಬೆಂಗಳೂರು–ಧಾರವಾಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸಿದಾಗ, ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂಬ ಬೇಡಿಕೆ ಇತ್ತು. ಆದರೆ, ಆ ಸಮಯದಲ್ಲಿ ಅದು ಸಾಧ್ಯವಾಗಿರಲಿಲ್ಲ. ಈಗ ಮೂಲಸೌಕರ್ಯ ಸುಧಾರಿಸಿ ಹೊಸ ರೈಲನ್ನು ಬೆಳಗಾವಿಯವರೆಗೆ ಓಡಿಸಲಾಗುತ್ತಿದೆ’ ಎಂದರು.</p>.<p>‘ವಂದೇ ಭಾರತ್ ನೂತನ ರೈಲು ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಹುಬ್ಬಳ್ಳಿಗೆ 7.30ಕ್ಕೆ ತಲುಪುತ್ತದೆ. ಬೆಳಗಾವಿಯಿಂದ ಬೆಂಗಳೂರಿನ ಪ್ರಯಾಣಕ್ಕೆ ಸಾಮಾನ್ಯ ರೈಲಿಗಿಂತ ಎಂಬತ್ತು ನಿಮಿಷ ಉಳಿತಾಯವಾಗಲಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದ ಜನರು, ಉದ್ಯಮಿಗಳ ಓಡಾಟಕ್ಕೆ ಅನುಕೂಲವಾಗಿದೆ’ ಎಂದು ಹೇಳಿದರು.</p>.<p>‘ರೈಲುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಂಟು ಸಾವಿರ ಕೋಟಿ ರೂಪಾಯಿ ವಿನಿಯೋಗಿಸಿದೆ. ಶೇ 99ರಷ್ಟು ಹಳಿಗಳು ವಿದ್ಯುದ್ದೀಕರಣವಾಗಿವೆ. ದಾವಣಗೆರೆ–ತುಮಕೂರು ಮಾರ್ಗ ವಿದ್ಯುದ್ದೀಕರಣವಾದರೆ ರೈಲಿನ ವೇಗ ಮತ್ತಷ್ಟು ಹೆಚ್ಚಲಿದೆ. ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ’ ಎಂದರು.</p>.<p>‘ಅರಣ್ಯ ಇಲಾಖೆ ಸಲಹೆ ಪ್ರಕಾರ ಅಂಕೋಲಾ–ಹುಬ್ಬಳ್ಳಿ ರೈಲು ಮಾರ್ಗಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ, ಉಪ ಮೇಯರ್ ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಗುಂಡೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>