<p><strong>ನವಲಗುಂದ:</strong> ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಪಟ್ಟಣದ ದ್ಯಾಮವ್ವನ ಗುಡಿ ಓಣಿಯ ಭವಾನೀಶಂಕರ (ಒಡಿಕೇಶ್ವರಿ ದೇವಸ್ಥಾನ) ದೇವಸ್ಥಾನದಲ್ಲಿ ಮಹಿಳೆಯರಿಗೆ ಶುಕ್ರವಾರ ಉಡಿತುಂಬಲಾಯಿತು.</p>.<p>ಹಬ್ಬದಂದು ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಉಡಿ ತುಂಬುವಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸುಧೀರ್ ಸಾಹುಕಾರ್ ಚಾಲನೆ ನೀಡಿದರು.</p>.<p>‘ನಾಡಿಗೆ ಉತ್ತಮ ಮಳೆ ಬೆಳೆ ಬರಲಿ, ಜನರ ಸುಖ ಸಮೃದ್ಧಿ ಹೆಚ್ಚಲಿ. ಎಲ್ಲರಿಗೂ ಸಂತೋಷದ ಬದುಕು ಕರುಣಿಸಲಿ’ ಎಂದು ಪ್ರಾರ್ಥಿಸಿ, ತಾಲ್ಲೂಕು ಆಡಳಿತದಿಂದ ದೇವಿಗೆ ಮಂಗಲಾಷ್ಟಕ ಸಹಿತ ಬಾಗಿನ (ಉಡಿ) ಅರ್ಪಿಸಲಾಯಿತು.</p>.<p>ಮಹಿಳೆಯರಿಗೆ ಕಂಕಣ ಕಟ್ಟಿ, ಅರಿಶಿನ ಕುಂಕುಮ ಹಚ್ಚಿ, ಹೂವು ತೊಡಿಸಿ, ಹಸಿರು ಬಳೆ, ಹಣ್ಣು, ಕಣ, ತಾಂಬೂಲದೊಂದಿಗೆ ಉಡಿ ತುಂಬಿ ಶುಭ ಹಾರೈಸಿದರು.</p>.<p>ತಾಲ್ಲೂಕು ಪಂಚಾಯ್ತಿ ಇಒ ಭಾಗ್ಯಶ್ರೀ ಜಾಹಗೀರದಾರ, ಕಂದಾಯ ನೀರಿಕ್ಷಕ ಸಂಜೀವ ಲಮಾಣಿ, ನರಸಿಂಹ ಇನಾಮತಿ, ಪೂರ್ಣಿಮಾ ಜೋಶಿ, ಉಮಾ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಪಟ್ಟಣದ ದ್ಯಾಮವ್ವನ ಗುಡಿ ಓಣಿಯ ಭವಾನೀಶಂಕರ (ಒಡಿಕೇಶ್ವರಿ ದೇವಸ್ಥಾನ) ದೇವಸ್ಥಾನದಲ್ಲಿ ಮಹಿಳೆಯರಿಗೆ ಶುಕ್ರವಾರ ಉಡಿತುಂಬಲಾಯಿತು.</p>.<p>ಹಬ್ಬದಂದು ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಉಡಿ ತುಂಬುವಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸುಧೀರ್ ಸಾಹುಕಾರ್ ಚಾಲನೆ ನೀಡಿದರು.</p>.<p>‘ನಾಡಿಗೆ ಉತ್ತಮ ಮಳೆ ಬೆಳೆ ಬರಲಿ, ಜನರ ಸುಖ ಸಮೃದ್ಧಿ ಹೆಚ್ಚಲಿ. ಎಲ್ಲರಿಗೂ ಸಂತೋಷದ ಬದುಕು ಕರುಣಿಸಲಿ’ ಎಂದು ಪ್ರಾರ್ಥಿಸಿ, ತಾಲ್ಲೂಕು ಆಡಳಿತದಿಂದ ದೇವಿಗೆ ಮಂಗಲಾಷ್ಟಕ ಸಹಿತ ಬಾಗಿನ (ಉಡಿ) ಅರ್ಪಿಸಲಾಯಿತು.</p>.<p>ಮಹಿಳೆಯರಿಗೆ ಕಂಕಣ ಕಟ್ಟಿ, ಅರಿಶಿನ ಕುಂಕುಮ ಹಚ್ಚಿ, ಹೂವು ತೊಡಿಸಿ, ಹಸಿರು ಬಳೆ, ಹಣ್ಣು, ಕಣ, ತಾಂಬೂಲದೊಂದಿಗೆ ಉಡಿ ತುಂಬಿ ಶುಭ ಹಾರೈಸಿದರು.</p>.<p>ತಾಲ್ಲೂಕು ಪಂಚಾಯ್ತಿ ಇಒ ಭಾಗ್ಯಶ್ರೀ ಜಾಹಗೀರದಾರ, ಕಂದಾಯ ನೀರಿಕ್ಷಕ ಸಂಜೀವ ಲಮಾಣಿ, ನರಸಿಂಹ ಇನಾಮತಿ, ಪೂರ್ಣಿಮಾ ಜೋಶಿ, ಉಮಾ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>