ಶ್ರಾವಣ ಮಾಸದ ಪ್ರಮುಖ ಹಬ್ಬವಾದ ವರಮಹಾಲಕ್ಷ್ಮಿ ಪೂಜೆಯಂದು ಗೌರಿ ಮೂರ್ತಿಗೆ ತರಹೇವಾರಿ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಐದಾರು ತರಹದ ಹಣ್ಣುಗಳು, ಹೋಳಿಗೆ, ಕಡುಬು ಸೇರಿದಂತೆ ಐದಾರು ತರಹದ ಸಿಹಿ ತಿನಿಸುಗಳನ್ನು ಮಾಡಲಾಗಿತ್ತು. ಈ ಮೊದಲು ಪ್ರತಿ ವರ್ಷ ಸಂಜೆ ಮುತೈದೆಯರನ್ನು ಮನೆಗೆ ಕರೆಯಿಸಿ ಅರಿಶಿಣ ಮತ್ತು ಕುಂಕುಮ ನೀಡುವ ಶಾಸ್ತ್ರ ಮಾಡಲಾಗುತ್ತಿತ್ತು. ಸೋಂಕಿನ ಭೀತಿ ಇರುವ ಕಾರಣ ಈ ವರ್ಷ ಹಬ್ಬದ ಆಚರಣೆ ಆಯಾ ಮನೆಗಳಿಗಷ್ಟೇ ಸೀಮಿತವಾಗಿತ್ತು.