<p><strong>ಧಾರವಾಡ</strong>: ನಗರದ ಮುರಘಾಮಠದಲ್ಲಿ ಮೃತ್ಯುಂಜಯಪ್ಪ ಸ್ವಾಮೀಜಿ 138ನೇ ವರ್ಧಂತಿ ಉತ್ಸವ ಶುಕ್ರವಾರ ಜರುಗಿತು.</p>.<p>ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಸ್ವಾಮೀಜಿ ಕರ್ತೃ ಗದ್ದುಗೆಗೆ ಪೂಜೆ ನೆರವೇರಿಸಲಾಯಿತು. ಪಲ್ಲಕ್ಕಿ ಮೆರವಣಿಗೆಯು ಸವದತ್ತಿ ರಸ್ತೆ, ಹಾವೇರಿಪೇಟ ವೃತ್ತ ಹಾದು ವಾಪಸ್ ಮಠದ ಆವರಣದಲ್ಲಿ ಸಂಪನ್ನಗೊಂಡಿತು.</p>.<p>ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಮೃತ್ಯುಂಜಯಪ್ಪ ಸ್ವಾಮೀಜಿ ತನು, ಮನ, ಧನವನ್ನು ಗುರು-ಲಿಂಗ-ಜಂಗಮಕ್ಕೆ ಅರ್ಪಿಸಿದ ದಾಸೋಹಿಯಾಗಿದ್ದರು. ಇಲ್ಲಿನ ಪ್ರಸಾದ ನಿಲಯವು ಅವರ ದೂರದೃಷ್ಟಿಯ ಫಲ. ಸಮಾಜ ಕಾರ್ಯಕ್ಕೆ ಬಹಳ ಪ್ರಾಮುಖ್ಯತೆ ನೀಡಿದ್ದರು’ ಎಂದರು.</p>.<p>ಬಸವಲಿಂಗ ಸ್ವಾಮಿಜಿ, ಮಠದ ಆಡಳಿತ ಮಂಡಳಿ ಉಪಾಧ್ಯಕ್ಷ ನಾಗರಾಜ ಪಟ್ಟಣಶೆಟ್ಟಿ, ಕಾರ್ಯದರ್ಶಿ ಡಿ.ಬಿ. ಲಕ್ಕಮ್ಮನಹಳ್ಳಿ, ವಿರೂಪಾಕ್ಷ ಕಟಗಿ, ಮಂಜುನಾಥ ಸಾಲಿಮಠ, ಬಿ.ಎಸ್. ಗಣಾಚಾರಿ, ಶಿವಣ್ಣ ಹೊಸೂರ, ಶಿವಯೋಗಿ ಇಂಡಿ, ಸತೀಶ ತುರಮರಿ, ಎಸ್.ಜಿ. ನಡಕಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ನಗರದ ಮುರಘಾಮಠದಲ್ಲಿ ಮೃತ್ಯುಂಜಯಪ್ಪ ಸ್ವಾಮೀಜಿ 138ನೇ ವರ್ಧಂತಿ ಉತ್ಸವ ಶುಕ್ರವಾರ ಜರುಗಿತು.</p>.<p>ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಸ್ವಾಮೀಜಿ ಕರ್ತೃ ಗದ್ದುಗೆಗೆ ಪೂಜೆ ನೆರವೇರಿಸಲಾಯಿತು. ಪಲ್ಲಕ್ಕಿ ಮೆರವಣಿಗೆಯು ಸವದತ್ತಿ ರಸ್ತೆ, ಹಾವೇರಿಪೇಟ ವೃತ್ತ ಹಾದು ವಾಪಸ್ ಮಠದ ಆವರಣದಲ್ಲಿ ಸಂಪನ್ನಗೊಂಡಿತು.</p>.<p>ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಮೃತ್ಯುಂಜಯಪ್ಪ ಸ್ವಾಮೀಜಿ ತನು, ಮನ, ಧನವನ್ನು ಗುರು-ಲಿಂಗ-ಜಂಗಮಕ್ಕೆ ಅರ್ಪಿಸಿದ ದಾಸೋಹಿಯಾಗಿದ್ದರು. ಇಲ್ಲಿನ ಪ್ರಸಾದ ನಿಲಯವು ಅವರ ದೂರದೃಷ್ಟಿಯ ಫಲ. ಸಮಾಜ ಕಾರ್ಯಕ್ಕೆ ಬಹಳ ಪ್ರಾಮುಖ್ಯತೆ ನೀಡಿದ್ದರು’ ಎಂದರು.</p>.<p>ಬಸವಲಿಂಗ ಸ್ವಾಮಿಜಿ, ಮಠದ ಆಡಳಿತ ಮಂಡಳಿ ಉಪಾಧ್ಯಕ್ಷ ನಾಗರಾಜ ಪಟ್ಟಣಶೆಟ್ಟಿ, ಕಾರ್ಯದರ್ಶಿ ಡಿ.ಬಿ. ಲಕ್ಕಮ್ಮನಹಳ್ಳಿ, ವಿರೂಪಾಕ್ಷ ಕಟಗಿ, ಮಂಜುನಾಥ ಸಾಲಿಮಠ, ಬಿ.ಎಸ್. ಗಣಾಚಾರಿ, ಶಿವಣ್ಣ ಹೊಸೂರ, ಶಿವಯೋಗಿ ಇಂಡಿ, ಸತೀಶ ತುರಮರಿ, ಎಸ್.ಜಿ. ನಡಕಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>