ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು.
ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ, ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.
9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.