<p><strong>ಹುಬ್ಬಳ್ಳಿ:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು.</p>.<p>ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ, ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.</p>.<p>9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/educationcareer/education/information-about-how-to-get-more-marks-in-sslc-exam-735633.html" target="_blank">ಎಸ್ಸೆಸ್ಸೆಲ್ಸಿ | ಗರಿಷ್ಠ ಅಂಕ ಗಳಿಕೆ ಹೇಗೆ?</a></p>.<p>ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಇಲ್ಲಿಯೂ ಹಾಗೆಯೇ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕೊರೊನಾ ಕಡಿಮೆ ಇದ್ದಾಗ ಬಂದ್ ಮಾಡಿ, ಜಾಸ್ತಿ ಆದ ಮೇಲೆ ಸಂತೆ ಮಾಡುತ್ತಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ಆನ್ಲೈನ್ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಇದು ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು.</p>.<p>ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ, ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.</p>.<p>9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/educationcareer/education/information-about-how-to-get-more-marks-in-sslc-exam-735633.html" target="_blank">ಎಸ್ಸೆಸ್ಸೆಲ್ಸಿ | ಗರಿಷ್ಠ ಅಂಕ ಗಳಿಕೆ ಹೇಗೆ?</a></p>.<p>ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಇಲ್ಲಿಯೂ ಹಾಗೆಯೇ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕೊರೊನಾ ಕಡಿಮೆ ಇದ್ದಾಗ ಬಂದ್ ಮಾಡಿ, ಜಾಸ್ತಿ ಆದ ಮೇಲೆ ಸಂತೆ ಮಾಡುತ್ತಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ಆನ್ಲೈನ್ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಇದು ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>