<p><strong>ಹುಬ್ಬಳ್ಳಿ:</strong> ‘ಇಲ್ಲಿನ ನೆಹರೂ ಮೈದಾನದಲ್ಲಿ ಸೆ.19ರಂದು ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ’ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ವಿವಿಧೆಡೆಯ ಒಂದು ಸಾವಿರ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>‘ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಜನರಿಗೆ ಇದು ಅಸ್ಥಿತ್ವದ ಪ್ರಶ್ನೆಯಾಗಿದ್ದು, ಎಲ್ಲ ರಂಗಗಳಲ್ಲಿ ಬಲಿಷ್ಠವಾಗಬೇಕಾದರೆ ಸಮಾಜದವರು ಒಗ್ಗಟ್ಟು ತೋರಿಸುವುದು ಅನಿವಾರ್ಯ. ಸಾರ್ವಜನಿಕರು ಅಂದು ಮಧ್ಯಾಹ್ನ 12 ಗಂಟೆ ಒಳಗೆ ನೆಹರೂ ಮೈದಾನಕ್ಕೆ ಬರಬೇಕು’ ಎಂದು ತಿಳಿಸಿದರು. </p>.<p>‘ಮಠಾಧೀಶರಿಗೆ ಮೂರು ಸಾವಿರ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಬೇರೆ ರಾಜ್ಯ, ಜಿಲ್ಲೆಗಳಿಂದ ಬರುವ ಮಠಾಧೀಶರು ಸಂಪರ್ಕಿಸಿದರೆ ಅವರಿಗೆ ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಮಧ್ಯಾಹ್ನ 2 ಗಂಟೆಗೆ ಮೂರು ಸಾವಿರ ಮಠದಿಂದ ನೆಹರೂ ಮೈದಾನದದವರೆಗೆ ಪಾದಯಾತ್ರೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ಗುರು, ವಿರಕ್ತ ಮಠಾಧೀಶರ ಜತೆಗೆ ಎಲ್ಲ ವರ್ಗಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ವೀರಶೈವ ಲಿಂಗಾಯತ ಒಂದು ಎನ್ನುವವರು ಅಂದು ಬರಬೇಕು. ಜಾತಿ ಗಣತಿಯಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ಸಮಾವೇಶದಲ್ಲಿ ಸ್ಪಷ್ಟ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಬಸವ ಸಂಸ್ಕೃತಿ ಯಾತ್ರೆ ನಡೆಸುತ್ತಿರುವುದರಿಂದ ಸಮಾಜದಲ್ಲಿ ಗೊಂದಲ ಉಂಟಾಗಿದೆ. ನಾವು ಎಲ್ಲರೊಂದಿಗೆ ಚರ್ಚೆ ನಡೆಸಿ, ಗೊಂದಲ ನಿವಾರಿಸಲು ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದು ಶಕ್ತಿ ಪ್ರದರ್ಶನಕ್ಕೆ ನಡೆಸುತ್ತಿರುವ ಸಮಾವೇಶ ಅಲ್ಲ’ ಎಂದರು.</p>.<p>‘ಇದು ಬೇಡ ಜಂಗಮ ಸಮಾವೇಶ’ ಎಂಬ ವಚನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಯಾವುದೇ ಸಮಾವೇಶ ನಡೆದ ಸಂದರ್ಭದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯ ಸಹಜ. ಈ ಸಮಾವೇಶದಲ್ಲಿ ಪಂಚಮಸಾಲಿ ಸಮಾಜದವರು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದು ಒಂದು ಜಾತಿಗೆ ಮೀಸಲಾದ ಸಮಾವೇಶ ಅಲ್ಲ’ ಎಂದು ಹೇಳಿದರು. </p>.<p>ಪತ್ರಿಕಾಗೋಷ್ಠಿಯಲ್ಲಿ ಕಮತಗಿಯ ಹುಚ್ಚೇಶ್ವರ ಸ್ವಾಮೀಜಿ, ಹಾವೇರಿಯ ಸದಾಶೀವ ಸ್ವಾಮೀಜಿ, ಮಾದನ ಹಿಪ್ಪರಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಅಮೀನಗಡದ ಶಂಕರ ರಾಜೇಂದ್ರ ಸ್ವಾಮೀಜಿ, ನೀಲಗುಂದದ ಚೆನ್ನಬಸವ ಶಿವಯೋಗಿಗಳು, ಕುಕನೂರಿನ ಚೆನ್ನಮಲ್ಲ ಸ್ವಾಮೀಜಿ, ಚೀಕಲಪರವಿಯ ಸದಾಶಿವ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಇಲ್ಲಿನ ನೆಹರೂ ಮೈದಾನದಲ್ಲಿ ಸೆ.19ರಂದು ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ’ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ವಿವಿಧೆಡೆಯ ಒಂದು ಸಾವಿರ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>‘ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಜನರಿಗೆ ಇದು ಅಸ್ಥಿತ್ವದ ಪ್ರಶ್ನೆಯಾಗಿದ್ದು, ಎಲ್ಲ ರಂಗಗಳಲ್ಲಿ ಬಲಿಷ್ಠವಾಗಬೇಕಾದರೆ ಸಮಾಜದವರು ಒಗ್ಗಟ್ಟು ತೋರಿಸುವುದು ಅನಿವಾರ್ಯ. ಸಾರ್ವಜನಿಕರು ಅಂದು ಮಧ್ಯಾಹ್ನ 12 ಗಂಟೆ ಒಳಗೆ ನೆಹರೂ ಮೈದಾನಕ್ಕೆ ಬರಬೇಕು’ ಎಂದು ತಿಳಿಸಿದರು. </p>.<p>‘ಮಠಾಧೀಶರಿಗೆ ಮೂರು ಸಾವಿರ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಬೇರೆ ರಾಜ್ಯ, ಜಿಲ್ಲೆಗಳಿಂದ ಬರುವ ಮಠಾಧೀಶರು ಸಂಪರ್ಕಿಸಿದರೆ ಅವರಿಗೆ ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಮಧ್ಯಾಹ್ನ 2 ಗಂಟೆಗೆ ಮೂರು ಸಾವಿರ ಮಠದಿಂದ ನೆಹರೂ ಮೈದಾನದದವರೆಗೆ ಪಾದಯಾತ್ರೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ಗುರು, ವಿರಕ್ತ ಮಠಾಧೀಶರ ಜತೆಗೆ ಎಲ್ಲ ವರ್ಗಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ವೀರಶೈವ ಲಿಂಗಾಯತ ಒಂದು ಎನ್ನುವವರು ಅಂದು ಬರಬೇಕು. ಜಾತಿ ಗಣತಿಯಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ಸಮಾವೇಶದಲ್ಲಿ ಸ್ಪಷ್ಟ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಬಸವ ಸಂಸ್ಕೃತಿ ಯಾತ್ರೆ ನಡೆಸುತ್ತಿರುವುದರಿಂದ ಸಮಾಜದಲ್ಲಿ ಗೊಂದಲ ಉಂಟಾಗಿದೆ. ನಾವು ಎಲ್ಲರೊಂದಿಗೆ ಚರ್ಚೆ ನಡೆಸಿ, ಗೊಂದಲ ನಿವಾರಿಸಲು ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದು ಶಕ್ತಿ ಪ್ರದರ್ಶನಕ್ಕೆ ನಡೆಸುತ್ತಿರುವ ಸಮಾವೇಶ ಅಲ್ಲ’ ಎಂದರು.</p>.<p>‘ಇದು ಬೇಡ ಜಂಗಮ ಸಮಾವೇಶ’ ಎಂಬ ವಚನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಯಾವುದೇ ಸಮಾವೇಶ ನಡೆದ ಸಂದರ್ಭದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯ ಸಹಜ. ಈ ಸಮಾವೇಶದಲ್ಲಿ ಪಂಚಮಸಾಲಿ ಸಮಾಜದವರು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದು ಒಂದು ಜಾತಿಗೆ ಮೀಸಲಾದ ಸಮಾವೇಶ ಅಲ್ಲ’ ಎಂದು ಹೇಳಿದರು. </p>.<p>ಪತ್ರಿಕಾಗೋಷ್ಠಿಯಲ್ಲಿ ಕಮತಗಿಯ ಹುಚ್ಚೇಶ್ವರ ಸ್ವಾಮೀಜಿ, ಹಾವೇರಿಯ ಸದಾಶೀವ ಸ್ವಾಮೀಜಿ, ಮಾದನ ಹಿಪ್ಪರಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಅಮೀನಗಡದ ಶಂಕರ ರಾಜೇಂದ್ರ ಸ್ವಾಮೀಜಿ, ನೀಲಗುಂದದ ಚೆನ್ನಬಸವ ಶಿವಯೋಗಿಗಳು, ಕುಕನೂರಿನ ಚೆನ್ನಮಲ್ಲ ಸ್ವಾಮೀಜಿ, ಚೀಕಲಪರವಿಯ ಸದಾಶಿವ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>