<p><strong>ಹುಬ್ಬಳ್ಳಿ: </strong>‘ರಾಜ್ಯದಲ್ಲೇ ಹೆಚ್ಚಿನ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮಾಜ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ’ ಎಂದು ವೀರಶೈವ ಲಿಂಗಾಯತ ಸಂಘಟನೆಯ ಪ್ರಕಾಶ ಬೆಂಡಿಗೇರಿ ಹೇಳಿದರು.</p>.<p>ವೀರಶೈವ ಲಿಂಗಾಯತ ಸಮಾಜದ ಸಬಲೀಕರಣ ಹಾಗೂ ಸಮಾಜದ ಮೇಲೆ ನಡೆಯುತ್ತಿರುವ ಅನ್ಯಾಯಗಳ ಕುರಿತು ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸರಿಯಾದ ಸಂಘಟನೆ ಹಾಗೂ ಹೋರಾಟದ ಕೊರತೆಯಿಂದಾಗಿ, 100ಕ್ಕೂ ಅಧಿಕ ಉಪ ಜಾತಿಗಳನ್ನೊಳಗೊಂಡ ಸಮಾಜದ ಬೆಳವಣಿಗೆ ಕುಂಠಿತವಾಗಿದೆ’ ಎಂದರು.</p>.<p>‘ಸಮಾಜದ ಸರ್ವರನ್ನೂ ಸಂಘಟಿಸುವ ಮೂಲಕ, ನಮ್ಮ ಹಕ್ಕನ್ನು ಪಡೆಯಲು ಹೋರಾಡಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ, ಸಂಘಟನೆಯು ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವ ಮೂಲಕ, ಸಬಲೀಕರಣಕ್ಕಾಗಿ ಶ್ರಮಿಸಬೇಕಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಧರ್ಮ, ಸಾಮಾಜಿಕ, ಶೈಕ್ಷಣಿಕ, ವ್ಯಾಪಾರ, ರಾಜಕೀಯ, ಕೃಷಿ, ಸಂಘಟನೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.</p>.<p>ಬಸವರಾಜ ಚನ್ನೋಜಿ, ಬಸವರಾಜ ಸುಳ್ಳದ, ನಿರ್ಮಲಾ ಹಿರೇಮಠ, ತಾರಾದೇವಿ ವಾಲಿ, ಗುರುಶಿದ್ಧ, ಸಂಶಿ, ಮಲ್ಲಿಕಾರ್ಜುನ ಸಂಶಿಮಠ, ಮಹಾಂತೆಶ ಗಿರಿಮಠ, ಪ್ರಭುರಾಜ ನವಲಗುಂದ ಮಠ, ನಿರಂಜನ ಹಿರೇಮಠ ಹಾಗೂ ರಾಜು ಓದನ್ನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ರಾಜ್ಯದಲ್ಲೇ ಹೆಚ್ಚಿನ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮಾಜ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ’ ಎಂದು ವೀರಶೈವ ಲಿಂಗಾಯತ ಸಂಘಟನೆಯ ಪ್ರಕಾಶ ಬೆಂಡಿಗೇರಿ ಹೇಳಿದರು.</p>.<p>ವೀರಶೈವ ಲಿಂಗಾಯತ ಸಮಾಜದ ಸಬಲೀಕರಣ ಹಾಗೂ ಸಮಾಜದ ಮೇಲೆ ನಡೆಯುತ್ತಿರುವ ಅನ್ಯಾಯಗಳ ಕುರಿತು ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸರಿಯಾದ ಸಂಘಟನೆ ಹಾಗೂ ಹೋರಾಟದ ಕೊರತೆಯಿಂದಾಗಿ, 100ಕ್ಕೂ ಅಧಿಕ ಉಪ ಜಾತಿಗಳನ್ನೊಳಗೊಂಡ ಸಮಾಜದ ಬೆಳವಣಿಗೆ ಕುಂಠಿತವಾಗಿದೆ’ ಎಂದರು.</p>.<p>‘ಸಮಾಜದ ಸರ್ವರನ್ನೂ ಸಂಘಟಿಸುವ ಮೂಲಕ, ನಮ್ಮ ಹಕ್ಕನ್ನು ಪಡೆಯಲು ಹೋರಾಡಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ, ಸಂಘಟನೆಯು ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವ ಮೂಲಕ, ಸಬಲೀಕರಣಕ್ಕಾಗಿ ಶ್ರಮಿಸಬೇಕಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಧರ್ಮ, ಸಾಮಾಜಿಕ, ಶೈಕ್ಷಣಿಕ, ವ್ಯಾಪಾರ, ರಾಜಕೀಯ, ಕೃಷಿ, ಸಂಘಟನೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.</p>.<p>ಬಸವರಾಜ ಚನ್ನೋಜಿ, ಬಸವರಾಜ ಸುಳ್ಳದ, ನಿರ್ಮಲಾ ಹಿರೇಮಠ, ತಾರಾದೇವಿ ವಾಲಿ, ಗುರುಶಿದ್ಧ, ಸಂಶಿ, ಮಲ್ಲಿಕಾರ್ಜುನ ಸಂಶಿಮಠ, ಮಹಾಂತೆಶ ಗಿರಿಮಠ, ಪ್ರಭುರಾಜ ನವಲಗುಂದ ಮಠ, ನಿರಂಜನ ಹಿರೇಮಠ ಹಾಗೂ ರಾಜು ಓದನ್ನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>