ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವುದಕ್ಕಾಗಿ, ಸರ್ಕಾರ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಂಜುಂಡಪ್ಪ ವರದಿ ಯಥಾವತ್ತಾಗಿ ಜಾರಿಯಾಗಬೇಕು. ಬೆಂಗಳೂರಿನಲ್ಲಿರುವ ಒಂಬತ್ತು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕು. ಗಡಿ ಬಗ್ಗೆ ಆಗಾಗ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ಕಠಿಣ ಸಂದೇಶ ನೀಡಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.