<p><strong>ಹುಬ್ಬಳ್ಳಿ: </strong>ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ 13.5 ಟಿಎಂಸಿ ಅಡಿ ನೀರು ಹಂಚಿಕೆಯಾಗಿ ಎರಡು ವರ್ಷವಾದರೂ, ರಾಜ್ಯ ಸರ್ಕಾರ ಇದುವರೆಗೂ ಯೋಜನೆಯ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಕರ್ನಾಟಕ ರೈತ ಸೇನಾ ಸಂಘಟನೆಯ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಗಾಗಿ ಸರ್ಕಾರ ₹500 ಕೋಟಿ ಹಣ ಮೀಸಲಿಟ್ಟಿದೆ. ರಾಜಕೀಯ ದಾಳವಾಗಿ ಈ ವಿಷಯವನ್ನು ಬಳಸಿಕೊಳ್ಳುವುದಕ್ಕಾಗಿ, ಈ ರೀತಿ ವಿಳಂಬ ಮಾಡಲಾಗುತ್ತಿದೆ ಆರೋಪಿಸಿದರು.</p>.<p>ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವುದಕ್ಕಾಗಿ, ಸರ್ಕಾರ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಂಜುಂಡಪ್ಪ ವರದಿ ಯಥಾವತ್ತಾಗಿ ಜಾರಿಯಾಗಬೇಕು. ಬೆಂಗಳೂರಿನಲ್ಲಿರುವ ಒಂಬತ್ತು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕು. ಗಡಿ ಬಗ್ಗೆ ಆಗಾಗ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ಕಠಿಣ ಸಂದೇಶ ನೀಡಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಗುರು ರಾಯನಗೌಡ್ರ, ಮಲ್ಲಿಕಾರ್ಜುನ ಆಲೇಕರ ಹಾಗೂ ಸಿದ್ದಲಿಂಗೇಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ 13.5 ಟಿಎಂಸಿ ಅಡಿ ನೀರು ಹಂಚಿಕೆಯಾಗಿ ಎರಡು ವರ್ಷವಾದರೂ, ರಾಜ್ಯ ಸರ್ಕಾರ ಇದುವರೆಗೂ ಯೋಜನೆಯ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಕರ್ನಾಟಕ ರೈತ ಸೇನಾ ಸಂಘಟನೆಯ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಗಾಗಿ ಸರ್ಕಾರ ₹500 ಕೋಟಿ ಹಣ ಮೀಸಲಿಟ್ಟಿದೆ. ರಾಜಕೀಯ ದಾಳವಾಗಿ ಈ ವಿಷಯವನ್ನು ಬಳಸಿಕೊಳ್ಳುವುದಕ್ಕಾಗಿ, ಈ ರೀತಿ ವಿಳಂಬ ಮಾಡಲಾಗುತ್ತಿದೆ ಆರೋಪಿಸಿದರು.</p>.<p>ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವುದಕ್ಕಾಗಿ, ಸರ್ಕಾರ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಂಜುಂಡಪ್ಪ ವರದಿ ಯಥಾವತ್ತಾಗಿ ಜಾರಿಯಾಗಬೇಕು. ಬೆಂಗಳೂರಿನಲ್ಲಿರುವ ಒಂಬತ್ತು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕು. ಗಡಿ ಬಗ್ಗೆ ಆಗಾಗ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ಕಠಿಣ ಸಂದೇಶ ನೀಡಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಗುರು ರಾಯನಗೌಡ್ರ, ಮಲ್ಲಿಕಾರ್ಜುನ ಆಲೇಕರ ಹಾಗೂ ಸಿದ್ದಲಿಂಗೇಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>