15ಕ್ಕೂ ಹೆಚ್ಚು ಕವನ ಸಂಕಲನ, ವಿಮರ್ಶೆ ಹಾಗೂ ಪ್ರಬಂಧ ಸಂಕಲನ, ಮಕ್ಕಳ ಬರಹಗಳು ಸೇರಿದಂತೆ ಹಲವು ಬಗೆ ಸಾಹಿತ್ಯ ರಚಿಸಿದ್ದಾರೆ. ಅವರ ‘ಜೀವಧ್ವನಿ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಗೌರವ, ಬೆಂಗಳೂರು ನಗರ ಸಾರಿಗೆ ಸಂಸ್ಥೆ ನೀಡುವ ನೃಪತುಂಗ ಪ್ರಶಸ್ತಿ, ಎಸ್.ಬಂಗಾರಪ್ಪ ಪ್ರತಿಷ್ಠಾನ ಹಾಗೂ ವಿಚಾರ ವೇದಿಕೆಯ ಸಾಹಿತ್ಯ ಬಂಗಾರ ಪ್ರಶಸ್ತಿ, ದುಬೈ ಯುಎಇ ಕನ್ನಡ ಸಂಘದ ಕನ್ನಡ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.