<p><strong>ಧಾರವಾಡ</strong>: ಬಿಎಸ್.ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. </p><p>‘ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು ₹ 2ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆಯ ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು ಮತ್ತು ಒಬ್ಬರು ಕಾನ್ಸ್ಟೆಬಲ್ ಸಹಿತ ಮೂವರನ್ನು ಬುಧವಾರ ಅಮಾನತುಗೊಳಿಸಲಾಗಿತ್ತು.</p>.ಧಾರವಾಡದಲ್ಲಿ ಬಿ.ಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸರು ಅಮಾನತು.ಧಾರವಾಡದಲ್ಲಿ ಬಿ.ಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮೇಲೆ ಕಿರುಕುಳದ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಬಿಎಸ್.ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. </p><p>‘ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು ₹ 2ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆಯ ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು ಮತ್ತು ಒಬ್ಬರು ಕಾನ್ಸ್ಟೆಬಲ್ ಸಹಿತ ಮೂವರನ್ನು ಬುಧವಾರ ಅಮಾನತುಗೊಳಿಸಲಾಗಿತ್ತು.</p>.ಧಾರವಾಡದಲ್ಲಿ ಬಿ.ಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸರು ಅಮಾನತು.ಧಾರವಾಡದಲ್ಲಿ ಬಿ.ಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮೇಲೆ ಕಿರುಕುಳದ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>