<p><strong>ಹುಬ್ಬಳ್ಳಿ:</strong> ವಿಜಯಪುರ–ಹುಬ್ಬಳ್ಳಿ ಇಂಟರ್ಸಿಟಿ ರೈಲು ಸಂಚಾರ ಫೆ. 16ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಿಲ್ದಾಣದಲ್ಲಿ ಹೊಸ ರೈಲಿಗೆ ಚಾಲನೆ ಸಿಗಲಿದೆ.</p>.<p>ವಾಣಿಜ್ಯ ನಗರಿಯಿಂದ ವಿಜಯಪುರಕ್ಕೆ ರೈಲಿನ ಸೌಲಭ್ಯ ಕಲ್ಪಿಸುವ ಅಗತ್ಯತೆ ಇದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ರಮೇಶ ಜಿಗಜಿಣಿಗಿ ಹಾಗೂ ಪಿ.ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವೀರಣ್ಣ ಚರಂತಿಮಠ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿಯಲ್ಲಿ ಅಂಗಡಿ ನಗರದಲ್ಲಿ ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಹೊಸ ರೈಲು ಓಡಿಸಲು ತೀರ್ಮಾನಿಸಿದ್ದರು. ಈ ರೈಲು ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ನಡುವೆ ಸಂಪರ್ಕ ಕೊಂಡಿಯಾಗಿದೆ.</p>.<p><strong>ರೈಲು ಸಂಚಾರ ರದ್ದು:</strong>ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಫೆ. 24ರಿಂದ 26ರ ತನಕ ಹುಬ್ಬಳ್ಳಿ–ಹಜರತ್ ನಿಜಾಮುದ್ದೀನ್ ಲಿಂಕ್ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಫೆ. 15ರಂದು ನವದೆಹಲಿ–ಕೆಎಸ್ಆರ್ ಎಕ್ಸ್ಪ್ರೆಸ್ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಗುಂತಕಲ್, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ಅರಸಿಕೆರೆ ಮತ್ತು ತುಮಕೂರು ಮಾರ್ಗದ ಮೂಲಕ ಬೆಂಗಳೂರು ತಲುಪಲಿದೆ.</p>.<p>ಫೆ. 17ರಂದು ಮೈಸೂರು–ಸಾಯಿನಗರ ಶಿರಡಿ ಎಕ್ಸ್ಪ್ರೆಸ್ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಹಾಸನ, ಅರಸಿಕೆರೆ, ಚಿಕ್ಕಜಾಜೂರು, ರಾಯದುರ್ಗ ಮಾರ್ಗದಲ್ಲಿ ತೆರಳಲಿದೆ ಎಂದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿಜಯಪುರ–ಹುಬ್ಬಳ್ಳಿ ಇಂಟರ್ಸಿಟಿ ರೈಲು ಸಂಚಾರ ಫೆ. 16ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಿಲ್ದಾಣದಲ್ಲಿ ಹೊಸ ರೈಲಿಗೆ ಚಾಲನೆ ಸಿಗಲಿದೆ.</p>.<p>ವಾಣಿಜ್ಯ ನಗರಿಯಿಂದ ವಿಜಯಪುರಕ್ಕೆ ರೈಲಿನ ಸೌಲಭ್ಯ ಕಲ್ಪಿಸುವ ಅಗತ್ಯತೆ ಇದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ರಮೇಶ ಜಿಗಜಿಣಿಗಿ ಹಾಗೂ ಪಿ.ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವೀರಣ್ಣ ಚರಂತಿಮಠ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿಯಲ್ಲಿ ಅಂಗಡಿ ನಗರದಲ್ಲಿ ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಹೊಸ ರೈಲು ಓಡಿಸಲು ತೀರ್ಮಾನಿಸಿದ್ದರು. ಈ ರೈಲು ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ನಡುವೆ ಸಂಪರ್ಕ ಕೊಂಡಿಯಾಗಿದೆ.</p>.<p><strong>ರೈಲು ಸಂಚಾರ ರದ್ದು:</strong>ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಫೆ. 24ರಿಂದ 26ರ ತನಕ ಹುಬ್ಬಳ್ಳಿ–ಹಜರತ್ ನಿಜಾಮುದ್ದೀನ್ ಲಿಂಕ್ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಫೆ. 15ರಂದು ನವದೆಹಲಿ–ಕೆಎಸ್ಆರ್ ಎಕ್ಸ್ಪ್ರೆಸ್ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಗುಂತಕಲ್, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ಅರಸಿಕೆರೆ ಮತ್ತು ತುಮಕೂರು ಮಾರ್ಗದ ಮೂಲಕ ಬೆಂಗಳೂರು ತಲುಪಲಿದೆ.</p>.<p>ಫೆ. 17ರಂದು ಮೈಸೂರು–ಸಾಯಿನಗರ ಶಿರಡಿ ಎಕ್ಸ್ಪ್ರೆಸ್ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಹಾಸನ, ಅರಸಿಕೆರೆ, ಚಿಕ್ಕಜಾಜೂರು, ರಾಯದುರ್ಗ ಮಾರ್ಗದಲ್ಲಿ ತೆರಳಲಿದೆ ಎಂದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>