ವಾಣಿಜ್ಯ ನಗರಿಯಿಂದ ವಿಜಯಪುರಕ್ಕೆ ರೈಲಿನ ಸೌಲಭ್ಯ ಕಲ್ಪಿಸುವ ಅಗತ್ಯತೆ ಇದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ರಮೇಶ ಜಿಗಜಿಣಿಗಿ ಹಾಗೂ ಪಿ.ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವೀರಣ್ಣ ಚರಂತಿಮಠ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿಯಲ್ಲಿ ಅಂಗಡಿ ನಗರದಲ್ಲಿ ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಹೊಸ ರೈಲು ಓಡಿಸಲು ತೀರ್ಮಾನಿಸಿದ್ದರು. ಈ ರೈಲು ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ನಡುವೆ ಸಂಪರ್ಕ ಕೊಂಡಿಯಾಗಿದೆ.