<p><strong>ಧಾರವಾಡ:</strong> ‘ವಿಶ್ವಕರ್ಮ ಸಮಾಜದವರು ಜಾತಿಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ ವಿಶ್ವಕರ್ಮ ಎಂದು ಬರೆಸಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಶ್ವಕರ್ಮ ಸಮಾಜದಲ್ಲಿ 40 ಉಪಜಾತಿಗಳು ಇವೆ. ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು. ಗಣತಿಯಲ್ಲಿ ಉಪಜಾತಿಗಳನ್ನು ನಮೂದಿಸಬಾರದು’ ಎಂದರು.</p>.<p>‘ರಾಜ್ಯ ಸರ್ಕಾರವು ಜಾತಿಗಣತಿ ಮರು ಸಮೀಕ್ಷೆ ನಡೆಸಲು ಮುಂದಾಗಿದೆ. ಎಲ್ಲ ಸಮಾಜದವರು ಜಾಗೃತರಾಗಿದ್ದು, ನಮ್ಮ ಸಮಾಜದವರು ಜಾಗೃತರಾಗಬೇಕು. ಅಂಕಿ–ಅಂಶದಲ್ಲಿಯೂ ನಿರ್ಲಕ್ಷ್ಯಕ್ಕೆ ಒಳಗಾದರೆ ಸವಲತ್ತು ಸಿಗುವುದಿಲ್ಲ’ ಎಂದರು.</p>.<p>‘ರಾಜ್ಯದಲ್ಲಿ ವಿಶ್ವಕರ್ಮ ಸಮಾಜದವರ ಜನಸಂಖ್ಯೆ 30 ಲಕ್ಷ ಇದೆ. ಆದರೆ, ಎಚ್.ಕಾಂತರಾಜು ಆಯೋಗವು 9 ಲಕ್ಷ ಇದೆ ಎಂದು ವರದಿ ನೀಡಿದೆ. ಈ ಸಮೀಕ್ಷೆ ಸರಿಯಾಗಿಲ್ಲ. ಇದನ್ನು ಎಲ್ಲ ಸಮಾಜದವರು ವಿರೋಧಿಸಿದ್ದಾರೆ’ ಎಂದರು.</p>.<p>ಏಕದಂಡಗಿಮಠದ ದೊಡ್ಡೇಂದ್ರ ಸ್ವಾಮೀಜಿ, ಪ್ರಣವನಿರಂಜನ ಸ್ವಾಮೀಜಿ, ಗಣೇಶ್ವರ ಸ್ವಾಮೀಜಿ, ಮೌನೇಶ್ವರ ಸ್ವಾಮೀಜಿ, ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ ಬಡಿಗೇರ, ವಿಠ್ಠಲ ಕಮ್ಮಾರ, ಶ್ರೀಶೈಲ ಸುತಾರ ಇದ್ದರು.</p>.<div><blockquote>ಜಾತಿ ಗಣತಿ ವೇಳೆ ಅಧಿಕಾರಿಗಳಿಗೆ ಗೊಂದಲವಾಗದಿರಲಿ ಎಂದು ರಾಜ್ಯದಾದ್ಯಂತ ವಿಶ್ವಕರ್ಮ ಸಮಾಜದವರ ಮನೆ ಬಾಗಿಲಗೆ ‘ವಿಶ್ವಕರ್ಮರ ಮನೆ’ ಲೇಬಲ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ</blockquote><span class="attribution">ಕೆ.ಪಿ.ನಂಜುಂಡಿ ಅಧ್ಯಕ್ಷ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ವಿಶ್ವಕರ್ಮ ಸಮಾಜದವರು ಜಾತಿಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ ವಿಶ್ವಕರ್ಮ ಎಂದು ಬರೆಸಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಶ್ವಕರ್ಮ ಸಮಾಜದಲ್ಲಿ 40 ಉಪಜಾತಿಗಳು ಇವೆ. ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು. ಗಣತಿಯಲ್ಲಿ ಉಪಜಾತಿಗಳನ್ನು ನಮೂದಿಸಬಾರದು’ ಎಂದರು.</p>.<p>‘ರಾಜ್ಯ ಸರ್ಕಾರವು ಜಾತಿಗಣತಿ ಮರು ಸಮೀಕ್ಷೆ ನಡೆಸಲು ಮುಂದಾಗಿದೆ. ಎಲ್ಲ ಸಮಾಜದವರು ಜಾಗೃತರಾಗಿದ್ದು, ನಮ್ಮ ಸಮಾಜದವರು ಜಾಗೃತರಾಗಬೇಕು. ಅಂಕಿ–ಅಂಶದಲ್ಲಿಯೂ ನಿರ್ಲಕ್ಷ್ಯಕ್ಕೆ ಒಳಗಾದರೆ ಸವಲತ್ತು ಸಿಗುವುದಿಲ್ಲ’ ಎಂದರು.</p>.<p>‘ರಾಜ್ಯದಲ್ಲಿ ವಿಶ್ವಕರ್ಮ ಸಮಾಜದವರ ಜನಸಂಖ್ಯೆ 30 ಲಕ್ಷ ಇದೆ. ಆದರೆ, ಎಚ್.ಕಾಂತರಾಜು ಆಯೋಗವು 9 ಲಕ್ಷ ಇದೆ ಎಂದು ವರದಿ ನೀಡಿದೆ. ಈ ಸಮೀಕ್ಷೆ ಸರಿಯಾಗಿಲ್ಲ. ಇದನ್ನು ಎಲ್ಲ ಸಮಾಜದವರು ವಿರೋಧಿಸಿದ್ದಾರೆ’ ಎಂದರು.</p>.<p>ಏಕದಂಡಗಿಮಠದ ದೊಡ್ಡೇಂದ್ರ ಸ್ವಾಮೀಜಿ, ಪ್ರಣವನಿರಂಜನ ಸ್ವಾಮೀಜಿ, ಗಣೇಶ್ವರ ಸ್ವಾಮೀಜಿ, ಮೌನೇಶ್ವರ ಸ್ವಾಮೀಜಿ, ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ ಬಡಿಗೇರ, ವಿಠ್ಠಲ ಕಮ್ಮಾರ, ಶ್ರೀಶೈಲ ಸುತಾರ ಇದ್ದರು.</p>.<div><blockquote>ಜಾತಿ ಗಣತಿ ವೇಳೆ ಅಧಿಕಾರಿಗಳಿಗೆ ಗೊಂದಲವಾಗದಿರಲಿ ಎಂದು ರಾಜ್ಯದಾದ್ಯಂತ ವಿಶ್ವಕರ್ಮ ಸಮಾಜದವರ ಮನೆ ಬಾಗಿಲಗೆ ‘ವಿಶ್ವಕರ್ಮರ ಮನೆ’ ಲೇಬಲ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ</blockquote><span class="attribution">ಕೆ.ಪಿ.ನಂಜುಂಡಿ ಅಧ್ಯಕ್ಷ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>