ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಆರಿಸಿ ಕಳುಹಿಸಿದ ಜನಪ್ರತಿನಿಧಿ ಸರಿಯಾಗಿ ಕೆಲಸ ಮಾಡದೇ ಇದ್ದರೆ, ಅವರನ್ನು ವಾಪಸ್ ಕರೆಯಿಸಿಕೊಳ್ಳುವ ಅಧಿಕಾರ ಕೂಡ ಜನರಿಗೆ ಇರಬೇಕು. ಜನಪ್ರತಿನಿಧಿ ಅಧಿಕಾರದಿಂದ ಯಜಮಾನನಂತೆ ಬೀಗದೆ ಸೇವಕನಂತೆ ಕೆಲಸ ಮಾಡಬೇಕು. ಆದ್ದರಿಂದ ಬಳ್ಳಾರಿ ಹೊರತುಪಡಿಸಿ ಉಳಿದ 27 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ’ ಎಂದರು. ಧಾರವಾಡ ಕ್ಷೇತ್ರದಿಂದ ಸಂತೋಷ ಸ್ಪರ್ಧಿಸಿದ್ದಾರೆ.