<p><strong>ಧಾರವಾಡ:</strong> ‘ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಎಲ್ಲರೂ ಸಹಕಾರ ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಕುರಿತು ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮದಲ್ಲಿ ಪ್ರತಿ ಮತಗಟ್ಟೆ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಮನೆ ಭೇಟಿ ಮೂಲಕ ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಿಸುವರು. ಈ ಕಾರ್ಯಕ್ಕೆ ಪಕ್ಷಗಳು ಮತಗಟ್ಟೆ ಮಟ್ಟದಲ್ಲಿ ನೇಮಿಸುವ ಬಿಎಲ್ಎಗಳು ಸಹಕಾರ ನೀಡಬೇಕು’ ಎಂದು ಹೇಳಿದರು.</p>.<p>‘ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಗ ಪ್ರಕ್ರಿಯೆ ನಡೆಸುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದ ನಂತರ ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ’ ಎಂದರು.</p>.<p>ಬಿಜೆಪಿಯ ಸಿದ್ದು ಕಲ್ಯಾಣಶೆಟ್ಟಿ, ನಾಗಪ್ಪ ಸುತಗಟ್ಟಿ, ಕಾಂಗ್ರೆಸ್ನ ಪ್ರಕಾಶ ಹಳಿಯಾಳ, ಜೆಡಿಎಸ್ ಹು–ಧಾ ಮಹಾನಗರ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ದೇವರಾಜ ಕಂಬಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಎಲ್ಲರೂ ಸಹಕಾರ ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಕುರಿತು ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮದಲ್ಲಿ ಪ್ರತಿ ಮತಗಟ್ಟೆ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಮನೆ ಭೇಟಿ ಮೂಲಕ ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಿಸುವರು. ಈ ಕಾರ್ಯಕ್ಕೆ ಪಕ್ಷಗಳು ಮತಗಟ್ಟೆ ಮಟ್ಟದಲ್ಲಿ ನೇಮಿಸುವ ಬಿಎಲ್ಎಗಳು ಸಹಕಾರ ನೀಡಬೇಕು’ ಎಂದು ಹೇಳಿದರು.</p>.<p>‘ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಗ ಪ್ರಕ್ರಿಯೆ ನಡೆಸುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದ ನಂತರ ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ’ ಎಂದರು.</p>.<p>ಬಿಜೆಪಿಯ ಸಿದ್ದು ಕಲ್ಯಾಣಶೆಟ್ಟಿ, ನಾಗಪ್ಪ ಸುತಗಟ್ಟಿ, ಕಾಂಗ್ರೆಸ್ನ ಪ್ರಕಾಶ ಹಳಿಯಾಳ, ಜೆಡಿಎಸ್ ಹು–ಧಾ ಮಹಾನಗರ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ದೇವರಾಜ ಕಂಬಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>