‘ಮನುಷ್ಯ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷವನ್ನು ನಿತ್ಯ ಸಮೂಹ ಮಾಧ್ಯಮಗಳಲ್ಲಿ ನೋಡುತ್ತಲೇ ಇರುತ್ತೇವೆ. ಕಾಡುಗಳ ನಾಶದಿಂದಾಗಿ ಕೀಟಗಳು, ಹಕ್ಕಿ ಹಾಗೂ ಪ್ರಾಣಿಗಳು ಅಳಿವಿನಿಂಚಿನಲ್ಲಿವೆ. ಹಾಗಾಗಿ, ಪ್ರಾಣಿಗಳ ಆವಾಸ್ಥಾನವನ್ನು ನಾಶ ಮಾಡದೆ ಅವುಗಳ ರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು’ ಎಂದರು
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮಹೇಶ್ಕುಮಾರ್ ವನ್ಯ ಜೀವಿಗಳ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋದಿಸಿಧರು. ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ, ಅರಣ್ಯ ಅಕಾಡೆಮಿಯ ಜಂಟಿ ನಿರ್ದೇಶಕಿ ದೀಪ್ ಜೆ. ಕಾಂಟ್ರಾಕ್ಟರ್, ಡಿಸಿಪಿ ಡಾ. ಶಿವಕುಮಾರ ಗುಣಾರೆ, ಪ್ರಾಧ್ಯಾಪಕ ಸಂಜಯ್ ಕೋಟಬಾಗಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಬಿವಿಬಿ ಎಂಜಿನಿಯರಿಂಗ್ ಕಾಲೇಜು ದ್ವಾರದಿಂದ ಆರಂಭಗೊಂಡ ನಡಿಗೆ, ಹೊಸೂರಿನ ಬಿಆರ್ಟಿಎಸ್ ಬಸ್ ನಿಲ್ದಾಣದವರೆಗೆ ತೆರಳಿ ನಂತರ, ಕಾಲೇಜಿಗೆ ವಾಪಸಾಗಿ ಅಂತ್ಯಗೊಂಡಿತು. ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು, ಸಂಘ–ಸಂಸ್ಥೆಗಳ ಸದಸ್ಯರು ಸೇರಿದಂತೆ 1500ಕ್ಕೂ ಹೆಚ್ಚು ಮಂದಿ ನಡಿಗೆಯಲ್ಲಿ ಭಾಗವಹಿಸಿದ್ದರು.