‘ಅಮೂಲ್ಯ ನೀರು ಪೋಲಾಗುವುದನ್ನು ತಡೆಗಟ್ಟಬಹುದು. ಕೃಷಿ ಕಾರ್ಮಿಕರ ಕೊರತೆ,ಸವುಳು ಜವುಳು, ಕಳೆ ನಿಯಂತ್ರಣ, ಭೂಮಿಯ ಸಮತಟ್ಟಿನ ಸಮಸ್ಯೆಗಳನ್ನು ಏಕ ಕಾಲಕ್ಕೆ ಬಗೆಹರಿಸಬಹುದು. ಸೂಕ್ಷ್ಮ ನೀರಾವರಿ ಪದ್ಧತಿ ಹವಾಮಾನ ವೈಪರೀತ್ಯಕ್ಕೊಂದು ಪರಿಹಾರ. ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ನೆಟಾಫಿಮ್ ಕಂಪನಿಯೊಂದಿಗೆ ಕಳೆದ ಮೂರು ವರ್ಷಗಳಿಂದ ಪ್ರಾತ್ಯಕ್ಷಿಕೆಗಳು, ಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರದರ್ಶನ ಮಳಿಗೆ ಮುಂತಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.