<p><strong>ಅಣ್ಣಿಗೇರಿ:</strong> ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಟಾಸ್ಕ್ಪೋರ್ಸ್ ತಂಡದ ಅಧಿಕಾರಿಗಳು ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು. </p>.<p>ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ನೇತೃತ್ವದ ತಂಡ ಪಟ್ಟಣದ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಯೂರಿಯಾ ಗೊಬ್ಬರವನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ₹266 ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ಇಲ್ಲಿನ ಕೆಲ ಮಾರಾಟಗಾರರು ಪ್ರತಿ ಯೂರಿಯಾ ಪ್ಯಾಕೇಟ್ ಬೆಲೆಗಿಂತ ₹80 ರಿಂದ ₹100ರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ರೈತರು ದೂರು ನೀಡಿದ್ದರು. </p>.<p>‘ಯೂರಿಯಾ ಗೊಬ್ಬರವನ್ನು ಖರೀದಿಸಿದರೆ ಅದರ ಜೊತೆ ಬೇರೆ ತರಹದ ರಸಗೊಬ್ಬರವನ್ನು ಖರೀದಿ ಮಾಡಬೇಕು ಎಂದು ಅಂಗಡಿ ಮಾಲೀಕರು ರೈತರಿಗೆ ಸೂಚನೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಯಾರೂ ಮಾಡಬಾರದು’ ಎಂದು ಎಚ್ಚರಿಸಿದರು. </p>.<p>ರಸಗೊಬ್ಬರ ಮಾರಾಟದಲ್ಲಿ ನಿಯಮ ಉಲ್ಲಂಘಿಸಬಾರದು. ರೈತರಿಗೆ ಗೊಬ್ಬರದ ರಸೀದಿ ನೀಡಬೇಕು. ದರಪಟ್ಟಿ ಹಾಕಬೇಕು. ಲಿಂಕ್ ಗೊಬ್ಬರ ಖರೀದಿಸುವಂತೆ ಒತ್ತಾಯಿಸಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಇಲ್ಲಿನ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೆ.ಎಸ್.ಪಾಟೀಲ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ:</strong> ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಟಾಸ್ಕ್ಪೋರ್ಸ್ ತಂಡದ ಅಧಿಕಾರಿಗಳು ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು. </p>.<p>ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ನೇತೃತ್ವದ ತಂಡ ಪಟ್ಟಣದ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಯೂರಿಯಾ ಗೊಬ್ಬರವನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ₹266 ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ಇಲ್ಲಿನ ಕೆಲ ಮಾರಾಟಗಾರರು ಪ್ರತಿ ಯೂರಿಯಾ ಪ್ಯಾಕೇಟ್ ಬೆಲೆಗಿಂತ ₹80 ರಿಂದ ₹100ರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ರೈತರು ದೂರು ನೀಡಿದ್ದರು. </p>.<p>‘ಯೂರಿಯಾ ಗೊಬ್ಬರವನ್ನು ಖರೀದಿಸಿದರೆ ಅದರ ಜೊತೆ ಬೇರೆ ತರಹದ ರಸಗೊಬ್ಬರವನ್ನು ಖರೀದಿ ಮಾಡಬೇಕು ಎಂದು ಅಂಗಡಿ ಮಾಲೀಕರು ರೈತರಿಗೆ ಸೂಚನೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಯಾರೂ ಮಾಡಬಾರದು’ ಎಂದು ಎಚ್ಚರಿಸಿದರು. </p>.<p>ರಸಗೊಬ್ಬರ ಮಾರಾಟದಲ್ಲಿ ನಿಯಮ ಉಲ್ಲಂಘಿಸಬಾರದು. ರೈತರಿಗೆ ಗೊಬ್ಬರದ ರಸೀದಿ ನೀಡಬೇಕು. ದರಪಟ್ಟಿ ಹಾಕಬೇಕು. ಲಿಂಕ್ ಗೊಬ್ಬರ ಖರೀದಿಸುವಂತೆ ಒತ್ತಾಯಿಸಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಇಲ್ಲಿನ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೆ.ಎಸ್.ಪಾಟೀಲ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>