ಶೀಘ್ರದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ
‘ಹೆಬ್ಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಮ್ಮಿನಬಾವಿಯಿಂದ ಹೆಬ್ಬಳ್ಳಿವರೆಗೆ ಅಳವಡಿಸಲಾದ ಕೆಲ ಪೈಪ್ಗಳು ಹಾಳಾಗಿದ್ದು, ಅಲ್ಲಲ್ಲಿ ಒಡೆದು ನೀರು ಪೋಲಾಗುತ್ತಿದೆ. ವಿದ್ಯುತ್ ಅಭಾವ ಹಾಗೂ ಇನ್ನಿತರೆ ಸಮಸ್ಯೆಗಳು ಸಹ ಎದುರಾಗುತ್ತಿವೆ. ಶೀಘ್ರದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಸು, ನೀರು ಸಮರ್ಪಕ ಒದಗಿಸಲು ಕ್ರಮ ಜರುಗಿಸಲಾಗುವುದು’ ಎಂದು ಧಾರವಾಡದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿ ಆರ್.ಎಂ.ಸೊಪ್ಪಿನಮಠ ಪ್ರತಿಕ್ರಿಯೆ ನೀಡಿದರು.