ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವೆಡೆ ರಸ್ತೆಗೆ ನುಗ್ಗಿದ ನೀರು: ಬಸ್‌ ಸಂಚಾರ ಸ್ಥಗಿತ

Last Updated 6 ಆಗಸ್ಟ್ 2019, 12:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಳೆ ಹಾಗೂ ಮಹಾರಾಷ್ಟ್ರ ದಿಂದ ಹರಿದು ಬರುತ್ತಿರುವ ನೀರು ರಸ್ತೆಗಳ ಮೇಲೆ ಹರಿಯುತ್ತಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ‌ ವ್ಯಾಪ್ತಿಯ ಹಲವು ಮಾರ್ಗಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.

ಹುಬ್ಬಳ್ಳಿ- ಕಾರವಾರ, ಶಿರಸಿ- ಸಿದ್ದಾಪುರ, ಶಿರಸಿ- ಅಂಕೋಲಾ, ಬೆಳಗಾವಿ- ಗೋವಾ, ಬೆಳಗಾವಿ- ಕೊಲ್ಹಾಪುರ, ಬೆಳಗಾವಿ- ವಿಜಯಪುರ, ಜಮಖಂಡಿ- ವಿಜಯಪುರ ಹಾಗೂ ಜಮಖಂಡಿ- ಮೀರಜ್ ಮಾರ್ಗಗಳಲ್ಲಿ ವಾಹನಗಳು ಸಂಚರಿಸಿತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣಾ, ಮಲಪ್ರಭಾ, ಘಟಪ್ರಭಾ, ದೂದ್‌ಗಂಗಾ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಸೇರಿದಂತೆ ಹಲವು ಮಾರ್ಗಗಳ ಮೇಲೆ ನೀರು ಹರಿಯುತ್ತಿರುವುದರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT