ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ನ್ಯೂನತೆ ಕೇವಲ ಸಾಂಕೇತಿಕ

Last Updated 29 ಮಾರ್ಚ್ 2018, 7:17 IST
ಅಕ್ಷರ ಗಾತ್ರ

ಮೈಸೂರು: ದೈಹಿಕ ನ್ಯೂನತೆ ಎಂಬುದು ಕೇವಲ ಸಾಂಕೇತಿಕವಾಗಿದ್ದು, ಇದರಿಂದ ಮಾನಸಿಕ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಮೈಸೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಎಂ.ಚಂದ್ರಕುಮಾರ್ ಹೇಳಿದರು.

ಜೆಎಸ್ಎಸ್ ಅಂಗವಿಕಲರ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಈಚೆಗೆ ನಡೆದ ಶ್ರವಣದೋಷವುಳ್ಳವರ ರಾಜ್ಯಮಟ್ಟದ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕರು ದೈಹಿಕ ನ್ಯೂನತೆ ಮರೆತು ರಾಷ್ಟ್ರ–ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಮಾರಿಯಪ್ಪನ್, ಜಾವಿಂದರ್‌ ಇದಕ್ಕೆ ಉದಾಹರಣೆ ಎಂದರು.

ಪ್ರಾಂಶುಪಾಲ ನಂಜುಂಡಸ್ವಾಮಿ, ಮಧುಸೂದನ್, ಪಳನಿಸ್ವಾಮಿ, ಸಂಘದ ಉಪಾಧ್ಯಕ್ಷ ಎಸ್.ಶಿವಶಂಕರ್, ಕಾರ್ಯದರ್ಶಿ ಜಿ.ಪಿ.ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT