<p><strong>ಹುಬ್ಬಳ್ಳಿ: </strong>ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ದುರ್ಬಲರಾಗಿದ್ದರೋ ಅಥವಾ ಅವರ ಬಗ್ಗೆ ಕ್ಷೇತ್ರದಲ್ಲಿ ಅಪಸ್ವರವಿತ್ತೋ ಗೊತ್ತಿಲ್ಲ. ಆದರೆ, ಮತದಾರರ ನಿರ್ಣಯಕ್ಕೆ ತಲೆ ಬಾಗುತ್ತೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾಜ ಸಜ್ಜನ ಅವರಿಗೆ ಪಕ್ಷ ಟಿಕೆಟ್ ನೀಡಿದ್ದಕ್ಕಾಗಿ, ಎಲ್ಲ ನಾಯಕರು ನಿಷ್ಠೆಯಿಂದ ಪ್ರಚಾರದಲ್ಲಿ ಪಾಲ್ಗೊಂಡು ಚುನಾವಣೆ ಎದುರಿಸಿದ್ದಾರೆ. ಆದರೆ ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದರು.</p>.<p>ಪ್ರಜಾಪ್ರಭುತ್ವದಲ್ಲಿ ಮತದಾರರ ನಿರ್ಣಯ ಅಂತಿಮ. ರಾಜಕಾರಣದಲ್ಲಿ ಸೋಲು, ಗೆಲುವು ಸಾಮಾನ್ಯ. ಮುಖಭಂಗ ಎನ್ನುವುದು ಇಲ್ಲ. ಬಿಜೆಪಿಗೆ ಇದು ಹಿನ್ನೆಡೆಯೂ ಅಲ್ಲ. ಈ ಸೋಲನ್ನೇ ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಗೆಲುವನ್ನಾಗಿ ಮಾಡಿಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ದುರ್ಬಲರಾಗಿದ್ದರೋ ಅಥವಾ ಅವರ ಬಗ್ಗೆ ಕ್ಷೇತ್ರದಲ್ಲಿ ಅಪಸ್ವರವಿತ್ತೋ ಗೊತ್ತಿಲ್ಲ. ಆದರೆ, ಮತದಾರರ ನಿರ್ಣಯಕ್ಕೆ ತಲೆ ಬಾಗುತ್ತೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾಜ ಸಜ್ಜನ ಅವರಿಗೆ ಪಕ್ಷ ಟಿಕೆಟ್ ನೀಡಿದ್ದಕ್ಕಾಗಿ, ಎಲ್ಲ ನಾಯಕರು ನಿಷ್ಠೆಯಿಂದ ಪ್ರಚಾರದಲ್ಲಿ ಪಾಲ್ಗೊಂಡು ಚುನಾವಣೆ ಎದುರಿಸಿದ್ದಾರೆ. ಆದರೆ ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದರು.</p>.<p>ಪ್ರಜಾಪ್ರಭುತ್ವದಲ್ಲಿ ಮತದಾರರ ನಿರ್ಣಯ ಅಂತಿಮ. ರಾಜಕಾರಣದಲ್ಲಿ ಸೋಲು, ಗೆಲುವು ಸಾಮಾನ್ಯ. ಮುಖಭಂಗ ಎನ್ನುವುದು ಇಲ್ಲ. ಬಿಜೆಪಿಗೆ ಇದು ಹಿನ್ನೆಡೆಯೂ ಅಲ್ಲ. ಈ ಸೋಲನ್ನೇ ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಗೆಲುವನ್ನಾಗಿ ಮಾಡಿಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>