ಭಾನುವಾರ, ಮಾರ್ಚ್ 26, 2023
31 °C

ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ:  'ನನಗೆ ಸಿಎಂ ಆಗುವ ಹುಚ್ಚು ಹಿಡಿದಿದೆ' ಎಂದು ಕೆ.ಎಸ್.ಈಶ್ವರಪ್ಪ ಹೋದಲೆಲ್ಲ ಹೇಳುತ್ತಿದ್ದಾರೆ. 'ನಾನು ಯಾವಾಗ ಆ ಮಾತು ಹೇಳಿದ್ದೇನೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದೂ ಸ್ಪಷ್ಟಪಡಿಸಿದರು .

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂದು ಉಪಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ. ಫಲಿತಾಂಶದ ಬಳಿಕ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದೇನೆ ಅಷ್ಟೇ. ಅದನ್ನೇ ಈಶ್ವರಪ್ಪ ನನಗೆ ಅಧಿಕಾರದ ಹುಚ್ಚು ಎಂದುಕೊಂಡು ಓಡಾಡುತ್ತಿದ್ದಾರೆ ಎಂದರು .

ನಮ್ಮನ್ನು ಟೀಕಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು