<p><strong>ಹುಬ್ಬಳ್ಳಿ: </strong>ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸಂಸ್ಫಾಪಕ ವಿನಯ್ ಗುರೂಜಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.</p>.<p>ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.</p>.<p>ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.</p>.<p>ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸಂಸ್ಫಾಪಕ ವಿನಯ್ ಗುರೂಜಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.</p>.<p>ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.</p>.<p>ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.</p>.<p>ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>