<p><strong>ಹುಬ್ಬಳ್ಳಿ</strong>: 'ಸ್ಟಾರ್ಟ್'ಅಪ್ ಕೇಂದ್ರಗಳು ಬೆಂಗಳೂರು ಕೇಂದ್ರೀಕೃತವಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿಕಾಲೇಜಿನ 75ನೇ ವರ್ಷಾಚರಣೆ ಮತ್ತು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇವೆ. ಇದರಿಂದಾಗಿ ಬೆಂಗಳೂರು ಐಟಿ, ಬಿಟಿ ಕ್ಷೇತ್ರದಲ್ಲಿ ಸಾಕಷ್ಟು ಬೆಳೆಯುತ್ತಿದೆ. ರಾಜ್ಯದ ಇತರ ನಗರಗಳಲ್ಲಿಯೂ ಈ ಕೇಂದ್ರಗಳು ಜಾಸ್ತಿಯಾದರೆ, ಕೃಷಿ, ಕೈಗಾರಿಕೆ, ಆಹಾರ ಕ್ಷೇತ್ರಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕಾರ್ಯಪಡೆಯೊಂದನ್ನು ರಚಿಸಿ, ಅದಕ್ಕೆ ಬಿವಿವಿ ಎಂಜಿನಿಯರಿಂಗ್ ಕಾಲೇಜಿನ ಕುಲಪತಿ ಅಶೋಕ ಶೆಟ್ಟರ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು' ಎಂದರು.</p>.<p>ಸಚಿವ ಮುರುಗೇಶ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: 'ಸ್ಟಾರ್ಟ್'ಅಪ್ ಕೇಂದ್ರಗಳು ಬೆಂಗಳೂರು ಕೇಂದ್ರೀಕೃತವಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿಕಾಲೇಜಿನ 75ನೇ ವರ್ಷಾಚರಣೆ ಮತ್ತು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇವೆ. ಇದರಿಂದಾಗಿ ಬೆಂಗಳೂರು ಐಟಿ, ಬಿಟಿ ಕ್ಷೇತ್ರದಲ್ಲಿ ಸಾಕಷ್ಟು ಬೆಳೆಯುತ್ತಿದೆ. ರಾಜ್ಯದ ಇತರ ನಗರಗಳಲ್ಲಿಯೂ ಈ ಕೇಂದ್ರಗಳು ಜಾಸ್ತಿಯಾದರೆ, ಕೃಷಿ, ಕೈಗಾರಿಕೆ, ಆಹಾರ ಕ್ಷೇತ್ರಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕಾರ್ಯಪಡೆಯೊಂದನ್ನು ರಚಿಸಿ, ಅದಕ್ಕೆ ಬಿವಿವಿ ಎಂಜಿನಿಯರಿಂಗ್ ಕಾಲೇಜಿನ ಕುಲಪತಿ ಅಶೋಕ ಶೆಟ್ಟರ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು' ಎಂದರು.</p>.<p>ಸಚಿವ ಮುರುಗೇಶ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>