ಬೆಳಗಾವಿ ವರದಿ: ಇಲ್ಲಿಲ್ಯಾಂಡ್ ಆಗಬೇಕಿದ್ದ ಟ್ರೂಜೆಟ್ ಕಂಪನಿಯ ವಿಮಾನ ತಿರುಪತಿಯಲ್ಲಿ, ಸ್ಪೈಸ್ ಜೆಟ್ ವಿಮಾನವನ್ನು ಹೈದರಾಬಾದ್ ನಲ್ಲಿ ಮತ್ತು ಇಂಡಿಗೊ ಕಂಪನಿಯ ವಿಮಾನವನ್ನು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಮಂಜು ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದರಿಂದ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕೆ ಇಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗಿಲ್ಲ ಎಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಪ್ರಜಾವಾಣಿಗೆ ಮಾಹಿತಿ ನೀಡಿದರು.