<p><strong>ಹುಬ್ಬಳ್ಳಿ: </strong>ಬೆಳಗಾವಿಯಲ್ಲಿ ಸೋಮವಾರ ಬೆಳಿಗ್ಗೆ ಲ್ಯಾಂಡ್ ಆಗಬೇಕಿದ್ದ ಇಂಡಿಗೊ ಸಂಸ್ಥೆ ವಿಮಾನ ಹವಾಮಾನ ವೈಪರೀತ್ಯದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ.</p>.<p>ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.</p>.<p>ಈ ವಿಮಾನ ಹೈದರಾಬಾದ್ ನಿಂದ ಹೊರಟಿತ್ತು. ನಿಗದಿಯಂತೆ ಬೆಳಗಾವಿಯಲ್ಲಿ ಲ್ಯಾಂಡ್ ಮಾಡಲು ಪೈಲಟ್ ಪ್ರಯತ್ನಿಸಿದ್ದರು. ಇದಕ್ಕೆ ಪೂರಕವಾದ ವಾತಾವರಣ ಇಲ್ಲದ ಕಾರಣ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ ಠಾಕರೆ ತಿಳಿಸಿದ್ದಾರೆ. ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.</p>.<p><strong>ಬೆಳಗಾವಿ ವರದಿ:</strong> ಇಲ್ಲಿಲ್ಯಾಂಡ್ ಆಗಬೇಕಿದ್ದ ಟ್ರೂಜೆಟ್ ಕಂಪನಿಯ ವಿಮಾನ ತಿರುಪತಿಯಲ್ಲಿ, ಸ್ಪೈಸ್ ಜೆಟ್ ವಿಮಾನವನ್ನು ಹೈದರಾಬಾದ್ ನಲ್ಲಿ ಮತ್ತು ಇಂಡಿಗೊ ಕಂಪನಿಯ ವಿಮಾನವನ್ನು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಮಂಜು ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದರಿಂದ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕೆ ಇಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗಿಲ್ಲ ಎಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಪ್ರಜಾವಾಣಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಬೆಳಗಾವಿಯಲ್ಲಿ ಸೋಮವಾರ ಬೆಳಿಗ್ಗೆ ಲ್ಯಾಂಡ್ ಆಗಬೇಕಿದ್ದ ಇಂಡಿಗೊ ಸಂಸ್ಥೆ ವಿಮಾನ ಹವಾಮಾನ ವೈಪರೀತ್ಯದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ.</p>.<p>ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.</p>.<p>ಈ ವಿಮಾನ ಹೈದರಾಬಾದ್ ನಿಂದ ಹೊರಟಿತ್ತು. ನಿಗದಿಯಂತೆ ಬೆಳಗಾವಿಯಲ್ಲಿ ಲ್ಯಾಂಡ್ ಮಾಡಲು ಪೈಲಟ್ ಪ್ರಯತ್ನಿಸಿದ್ದರು. ಇದಕ್ಕೆ ಪೂರಕವಾದ ವಾತಾವರಣ ಇಲ್ಲದ ಕಾರಣ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ ಠಾಕರೆ ತಿಳಿಸಿದ್ದಾರೆ. ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.</p>.<p><strong>ಬೆಳಗಾವಿ ವರದಿ:</strong> ಇಲ್ಲಿಲ್ಯಾಂಡ್ ಆಗಬೇಕಿದ್ದ ಟ್ರೂಜೆಟ್ ಕಂಪನಿಯ ವಿಮಾನ ತಿರುಪತಿಯಲ್ಲಿ, ಸ್ಪೈಸ್ ಜೆಟ್ ವಿಮಾನವನ್ನು ಹೈದರಾಬಾದ್ ನಲ್ಲಿ ಮತ್ತು ಇಂಡಿಗೊ ಕಂಪನಿಯ ವಿಮಾನವನ್ನು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಮಂಜು ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದರಿಂದ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕೆ ಇಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗಿಲ್ಲ ಎಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಪ್ರಜಾವಾಣಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>