ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕ್ಷೇತ್ರದಲ್ಲಿ ಒಂದು ಕಡೆ ಪ್ರಚಾರ ಕೈಗೊಂಡರೆ, ಪತ್ನಿ ಪ್ರಭಾವತಿ ಮುನೇನಕೊಪ್ಪ ಕ್ಷೇತ್ರದ ಮತ್ತೊಂದು ಕಡೆ ತಮ್ಮ ಸಂಗಡಿಗರೊಂದಿಗೆ ಪತಿಯ ಪರ ಮತಯಾಚನೆ ಮಾಡುತ್ತಿದ್ದಾರೆ.
ಕ್ಷೇತ್ರದಲ್ಲಿ ಈಗಾಗಲೇ ನನ್ನ ಪತಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಕೈಗೊಂಡ ಯೋಜನೆಗಳು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿವೆ. ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗಳು ಇಂದು ಸಾಕಾರಗೊಂಡಿರುವುದು ನಮ್ಮೆಲ್ಲರಿಗೂ ತೃಪ್ತಿದಾಯಕವಾಗಿದೆ ಎಂದರು.