ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಹಾವೇರಿ ಅಥವಾ ಧಾರವಾಡದಿಂದ ಟಿಕೆಟ್ ಕೊಡುವಂತೆ ಅರ್ಜಿ ಹಾಕಿದ್ದೆ. ನನಗೆ ಅನ್ಯಾಯವಾಗಿದೆ. ಪಕ್ಷದಲ್ಲಿ ಕುಟುಂಬ ರಾಜಕಾರಣ, ಹಣಬಲ, ತೋಳ್ಬಲ ಹಾಗೂ ಪ್ರಭಾವ ಬಳಕೆ ಮಿತಿಮೀರಿದೆ. ಹಿರಿತನಕ್ಕೆ ಬೆಲೆ ಇಲ್ಲದಾಗಿದ್ದು, ಹೊಂದಾಣಿಕೆ ರಾಜಕಾರಣವೇ ಮುಂಚೂಣಿಯಲ್ಲಿದೆ. ಸ್ವತಂತ್ರವಾಗಿ ಸ್ಪರ್ಧಿಸುವಂತೆ ಹಿತೈಷಿಗಳು ಒತ್ತಡ ಹೇರಿದ್ದಾರೆ’ ಎಂದರು.