<p><strong>ಹುಬ್ಬಳ್ಳಿ:</strong> ಯುಪಿಎ ಅಂಗಪಕ್ಷಗಳಲ್ಲಿ ಒಗ್ಗಟ್ಟಿಲ್ಲ. ಜೊತೆಗೆ ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಅವರಲ್ಲಿ ಒಮ್ಮತವಿಲ್ಲ. ಹೀಗಿರುವಾಗ ರಾಹುಲ್ಗೆ ಮೈತ್ರಿಕೂಟ ರಚಿಸುವ ಹೊಣೆ ವಹಿಸಿರುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಟೀಕಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೋದಿ ವರ್ಸಸ್ ಆಲ್ ಅದರ್ಸ್’ ಎಂಬುದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಫಲ ನೀಡುವುದಿಲ್ಲ. ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.</p>.<p class="Subhead"><strong>ದತ್ತ ಮೊದಲು ದಾಖಲೆ ನೀಡಲಿ:</strong>‘ಉತ್ತರ ಕರ್ನಾಟಕಕ್ಕೆ ಎಚ್.ಡಿ.ದೇವೇಗೌಡರ ಕೊಡುಗೆ’ ಕುರಿತು ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ ಹೊರ ತಂದಿರುವ 50 ಪುಟಗಳ ಹೊತ್ತಿಗೆಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಅದನ್ನು ಮೊದಲು ನಮಗೆ ತಲುಪಿಸಲಿ. ಆ ಮೇಲೆ ಅದರ ಕುರಿತು ಚರ್ಚಿಸೋಣ ಎಂದರು.</p>.<p><strong>ಸಹಕರಿಸಲು ಮನವಿ:</strong>ನಿರಂತರ ಮಳೆಯಾಗುತ್ತಿರುವುದರಿಂದ ನಗರದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.</p>.<p>ಸಿಆರ್ಎಫ್ ಅನುದಾನ ಮತ್ತು ಬಿಆರ್ಟಿಎಸ್, ಟೆಂಡರ್ ಶ್ಯೂರ್ ಕಾಮಗಾರಿಗಳು ಏಕಕಾಲಕ್ಕೆ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿರುವುದು ಸಹಜ. ಕಾಮಗಾರಿ ಮುಗಿಯುವವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಕೇಂದ್ರ ಸರ್ಕಾರವು ಅವಳಿ ನಗರದ ರಸ್ತೆಗಳ ಅಭಿವೃದ್ಧಿಗೆ ₹ 430 ಕೋಟಿ ಸಿಆರ್ಎಫ್ ಅನುದಾನ ನೀಡಿದೆ. ಆದರೆ, ರಾಜ್ಯ ಸರ್ಕಾರವು ಟೆಂಡರ್ ಕರೆಯದೇ ಇರುವುದರಿಂದ ಹಾಗೂ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡದಿರುವುದರಿಂದ ರಸ್ತೆಗಳ ಸುಧಾರಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಯುಪಿಎ ಅಂಗಪಕ್ಷಗಳಲ್ಲಿ ಒಗ್ಗಟ್ಟಿಲ್ಲ. ಜೊತೆಗೆ ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಅವರಲ್ಲಿ ಒಮ್ಮತವಿಲ್ಲ. ಹೀಗಿರುವಾಗ ರಾಹುಲ್ಗೆ ಮೈತ್ರಿಕೂಟ ರಚಿಸುವ ಹೊಣೆ ವಹಿಸಿರುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಟೀಕಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೋದಿ ವರ್ಸಸ್ ಆಲ್ ಅದರ್ಸ್’ ಎಂಬುದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಫಲ ನೀಡುವುದಿಲ್ಲ. ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.</p>.<p class="Subhead"><strong>ದತ್ತ ಮೊದಲು ದಾಖಲೆ ನೀಡಲಿ:</strong>‘ಉತ್ತರ ಕರ್ನಾಟಕಕ್ಕೆ ಎಚ್.ಡಿ.ದೇವೇಗೌಡರ ಕೊಡುಗೆ’ ಕುರಿತು ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ ಹೊರ ತಂದಿರುವ 50 ಪುಟಗಳ ಹೊತ್ತಿಗೆಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಅದನ್ನು ಮೊದಲು ನಮಗೆ ತಲುಪಿಸಲಿ. ಆ ಮೇಲೆ ಅದರ ಕುರಿತು ಚರ್ಚಿಸೋಣ ಎಂದರು.</p>.<p><strong>ಸಹಕರಿಸಲು ಮನವಿ:</strong>ನಿರಂತರ ಮಳೆಯಾಗುತ್ತಿರುವುದರಿಂದ ನಗರದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.</p>.<p>ಸಿಆರ್ಎಫ್ ಅನುದಾನ ಮತ್ತು ಬಿಆರ್ಟಿಎಸ್, ಟೆಂಡರ್ ಶ್ಯೂರ್ ಕಾಮಗಾರಿಗಳು ಏಕಕಾಲಕ್ಕೆ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿರುವುದು ಸಹಜ. ಕಾಮಗಾರಿ ಮುಗಿಯುವವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಕೇಂದ್ರ ಸರ್ಕಾರವು ಅವಳಿ ನಗರದ ರಸ್ತೆಗಳ ಅಭಿವೃದ್ಧಿಗೆ ₹ 430 ಕೋಟಿ ಸಿಆರ್ಎಫ್ ಅನುದಾನ ನೀಡಿದೆ. ಆದರೆ, ರಾಜ್ಯ ಸರ್ಕಾರವು ಟೆಂಡರ್ ಕರೆಯದೇ ಇರುವುದರಿಂದ ಹಾಗೂ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡದಿರುವುದರಿಂದ ರಸ್ತೆಗಳ ಸುಧಾರಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>